ಬ್ರೇಕಿಂಗ್ ನ್ಯೂಸ್
03-11-23 10:31 pm Bangalore Correspondent ಕರ್ನಾಟಕ
ಬೆಂಗಳೂರು, ನ.3: ಬೈಂದೂರು ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಯನ್ನು ಬಂಧಿಸಿ 50 ದಿನಗಳ ನಂತರ ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ.
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಟಿಕೆಟ್ಗಾಗಿ ನಗದು ಹಗರಣದಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. 68 ಸಾಕ್ಷಿಗಳಿಂದ ಹೇಳಿಕೆ ಪಡೆದು ಆಡಿಯೋ, ವಿಡಿಯೋ ಮುಂತಾದ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಚೈತ್ರಾ ಸೇರಿ ಆರು ಮಂದಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ಪಡೆದು ವಂಚಿಸಿದ್ದರು.
ಮುಂದಿನ ವಾರ ಸಿಸಿಬಿ ಪೊಲೀಸರು ಏಳು ಜನರ ವಿರುದ್ಧದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಚೈತ್ರಾ ಕುಂದಾಪುರ, ಶ್ರೀಕಾಂತ್, ಗಗನ್ ಕಡೂರ್, ವಿಜಯನಗರ ಮಠದ ಹಾಲಶ್ರೀ, ಧನರಾಜ್ ಮತ್ತು ಚನ್ನನಾಯಕ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆರೋಪಿಗಳಿಂದ 4.11 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ದೂರುದಾರರಾದ ಉದ್ಯಮಿ ಗೋವಿಂದ ಬಾಬು ಅವರು ಚೈತ್ರಾ ಮತ್ತು ಗ್ಯಾಂಗ್ ಕಂತುಗಳಲ್ಲಿ 5 ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಚೈತ್ರಾ ಮತ್ತು ಅವರ ತಂಡ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ನಂಬಿಸಿ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು. ಹಣ ಪಡೆದ ನಂತರ ತನ್ನಿಂದ ಹಣ ಪಡೆದಿದ್ದ ಆರ್ಎಸ್ಎಸ್ನ ಹಿರಿಯ ಮುಖಂಡ ವಿಶ್ವನಾಥ್ ಸಾವನ್ನಪ್ಪಿದ್ದು, ಮರು ಪಾವತಿಸಲು ಸಾಧ್ಯವಿಲ್ಲ ಎಂದು ಆರೋಪಿಗಳು ಕತೆಕಟ್ಟಿದ್ದರು.
CCB police prepare charge sheet against chaithra kundapura over BJP ticket scam.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm