ಬ್ರೇಕಿಂಗ್ ನ್ಯೂಸ್
03-11-23 10:31 pm Bangalore Correspondent ಕರ್ನಾಟಕ
ಬೆಂಗಳೂರು, ನ.3: ಬೈಂದೂರು ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಯನ್ನು ಬಂಧಿಸಿ 50 ದಿನಗಳ ನಂತರ ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ.
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಟಿಕೆಟ್ಗಾಗಿ ನಗದು ಹಗರಣದಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. 68 ಸಾಕ್ಷಿಗಳಿಂದ ಹೇಳಿಕೆ ಪಡೆದು ಆಡಿಯೋ, ವಿಡಿಯೋ ಮುಂತಾದ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಚೈತ್ರಾ ಸೇರಿ ಆರು ಮಂದಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ಪಡೆದು ವಂಚಿಸಿದ್ದರು.
ಮುಂದಿನ ವಾರ ಸಿಸಿಬಿ ಪೊಲೀಸರು ಏಳು ಜನರ ವಿರುದ್ಧದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಚೈತ್ರಾ ಕುಂದಾಪುರ, ಶ್ರೀಕಾಂತ್, ಗಗನ್ ಕಡೂರ್, ವಿಜಯನಗರ ಮಠದ ಹಾಲಶ್ರೀ, ಧನರಾಜ್ ಮತ್ತು ಚನ್ನನಾಯಕ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆರೋಪಿಗಳಿಂದ 4.11 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ದೂರುದಾರರಾದ ಉದ್ಯಮಿ ಗೋವಿಂದ ಬಾಬು ಅವರು ಚೈತ್ರಾ ಮತ್ತು ಗ್ಯಾಂಗ್ ಕಂತುಗಳಲ್ಲಿ 5 ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಚೈತ್ರಾ ಮತ್ತು ಅವರ ತಂಡ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ನಂಬಿಸಿ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು. ಹಣ ಪಡೆದ ನಂತರ ತನ್ನಿಂದ ಹಣ ಪಡೆದಿದ್ದ ಆರ್ಎಸ್ಎಸ್ನ ಹಿರಿಯ ಮುಖಂಡ ವಿಶ್ವನಾಥ್ ಸಾವನ್ನಪ್ಪಿದ್ದು, ಮರು ಪಾವತಿಸಲು ಸಾಧ್ಯವಿಲ್ಲ ಎಂದು ಆರೋಪಿಗಳು ಕತೆಕಟ್ಟಿದ್ದರು.
CCB police prepare charge sheet against chaithra kundapura over BJP ticket scam.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm