ಬ್ರೇಕಿಂಗ್ ನ್ಯೂಸ್
04-11-23 11:57 am Bangalore Correspondent ಕರ್ನಾಟಕ
ಬೆಂಗಳೂರು, ನ 04: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಜಾತಿ ನಿಂದನೆ ಮಾಡಿರುವ ಆರೋಪ ಸಂಬಂಧ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆ ಶುಕ್ರವಾರ ಸಂಜೆ ಸಂಪಿಗೆಹಳ್ಳಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.
ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂದರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನು ಭೈರಪ್ಪ ಹರೀಶ್ ಕುಮಾರ್ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ ವಿರುದ್ಧ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಪುನೀತ್ ಕೆರೆಹಳ್ಳಿ ತಮ್ಮನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿ ಅವಾಚ್ಯವಾಗಿ ನಿಂದಿಸಿದ್ದಾನೆ ಎಂದು ದೂರಿದ್ದರು.
ಅಕ್ಟೋಬರ್ 17 ಹಾಗೂ 18ರಂದು ತನ್ನ ಫೇಸ್ಬುಕ್ ಖಾತೆಯಲ್ಲಿ ವಿವಿಧ ಪೋಸ್ಟ್ ಮಾಡಿರುವ ಪುನೀತ್ ಕೆರೆಹಳ್ಳಿ ತಮ್ಮ ವಿರುದ್ಧ ಅವಾಚ್ಯವಾಗಿ ನಿಂದಿಸಿ, ತಮ್ಮ ಕುಟುಂಬ ಹಾಗೂ ಮಕ್ಕಳನ್ನು ಉದ್ದೇಶಿಸಿ ಸಮಾಜದಲ್ಲಿ ತಲೆ ಎತ್ತಿಕೊಂಡು ತಿರುಗಾಡದಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹಾಗೂ ದಲಿತ ಸಮುದಾಯದವರಾದ ತಮ್ಮನ್ನು ಉದ್ದೇಶಿಸಿ ಜಾತಿನಿಂದನೆ ಮಾಡಲಾಗಿದೆ ಎಂದು ಭೈರಪ್ಪ ಹರೀಶ್ ಕುಮಾರ್ ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಈ ದೂರಿನನ್ವಯ ಪುನೀತ್ ಕೆರೆಹಳ್ಳಿ ವಿರುದ್ಧ ಜಾತಿ ನಿಂದನೆ, ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಆರೋಪದಡಿ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ರದ್ದು:ಕಳೆದ ಆಗಸ್ಟ್ 11ರಂದು ಪೊಲೀಸರು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿ ನೀಡಿತ್ತು. ಹೀಗಾಗಿ ಪುನೀತ್ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆ ರದ್ದುಪಡಿಸಿ ಪರಪ್ಪನ ಅಗ್ರಹಾರದಿಂದ ಬಿಡುಗಡೆ ಮಾಡಲಾಗಿತ್ತು.
ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಗಲಭೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿತ್ತು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆದಿದ್ದರು.
Puneeth Kerehalli, a pro-Hindu activist, has been taken into custody by the Sampigehalli police for allegedly making casteist remarks on social networking site Facebook. Puneeth Kerehalli was taken into custody by the Sampigehalli police on Friday evening after a case was registered at Sampigehalli police station on the complaint of pro-Kannada activist Bhyrappa Harish Kumar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm