ಬ್ರೇಕಿಂಗ್ ನ್ಯೂಸ್
05-11-23 06:22 pm HK News Desk ಕರ್ನಾಟಕ
ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.


ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm