ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm