ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
19-01-26 03:08 pm
Bangalore Correspondent
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm