ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm