ಬ್ರೇಕಿಂಗ್ ನ್ಯೂಸ್
09-11-23 12:51 pm HK News Desk ಕರ್ನಾಟಕ
ಹಾಸನ, ನ.9: ಪಕ್ಷದ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೇಮಕ ವಿಳಂಬ ಆಗಿರುವುದು ಪಕ್ಷದ ನಾಯಕರಿಗೆ ಮುಜುಗರ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಸದಾನಂದ ಗೌಡ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸ್ಥಾನಗಳಿಗೆ ನೇಮಕಾತಿ ವಿಳಂಬ ಆಗುತ್ತಿರುವುದಕ್ಕೆ ನಾವು ವಿಷಾದಿಸುತ್ತೇವೆ. ನಾವು ಆ ತಪ್ಪನ್ನು ಒಪ್ಪಿಕೊಳ್ಳುತ್ತೇವೆ. ಇದರಿಂದ ನಮಗೆ ಮುಜುಗರವನ್ನು ಉಂಟುಮಾಡಿದೆ. ನಮ್ಮ ನಾಯಕರು ಈ ವಿಷಯದ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಐದು ರಾಜ್ಯಗಳ ಚುನಾವಣೆಗಳು ಮುಗಿದ ನಂತರ, ಘೋಷಣೆ ಮಾಡಬಹುದೆಂದು ನಿರೀಕ್ಷಿಸುತ್ತೇವೆ ಎಂದವರು ಹೇಳಿದ್ದಾರೆ.
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರ ಸಂಬಂಧಿಸಿದಂತೆ ನಮ್ಮ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಆದರೆ, ನಮ್ಮ ಕಾರ್ಯಕರ್ತರು ಇದಕ್ಕೆ ಸಮ್ಮತಿ ಸೂಚಿಸಿಲ್ಲ. ಇಷ್ಟು ವರ್ಷ ವಿರೋಧಿಸಿಕೊಂಡು ಬಂದಿರುವ ಪಕ್ಷದೊಂದಿಗೆ ಏಕಾಏಕಿ ಮೈತ್ರಿ ಮಾಡಿಕೊಳ್ಳುವುದು ಸರಿಯಲ್ಲವೆಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ನಾವು ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.
ಇದೇ ವೇಳೆ, ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. ಹೀಗಿರುವಾಗ ಮತ್ತಷ್ಟು ಕೇಳುವುದು ಸ್ವಾರ್ಥ ಆಗುತ್ತದೆ ಎಂದು ಡಿವಿಎಸ್ ಹೇಳಿದ್ದಾರೆ.
Bengaluru North Member of Parliament DV Sadananda Gowda on Wednesday said that the appointment of the Leader of Opposition and the Bharatiya Janata Party state president is delayed owing to alleged differences among a few senior leaders of the party.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm