ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm