ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
19-01-26 03:33 pm
HK News Desk
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm