ಬ್ರೇಕಿಂಗ್ ನ್ಯೂಸ್
09-11-23 10:49 pm Bangalore Correspondent ಕರ್ನಾಟಕ
ಬೆಂಗಳೂರು, ನ.9: ಅಂತೂ ಇಂತೂ ಬಿಜೆಪಿಯ ಸಂತೋಷ ಕೂಟದ ಆಟ ಗೆಲುವಿನತ್ತ ಸಾಗುತ್ತಿದೆ, ಬಿಜೆಪಿಯನ್ನು ಸಂಪೂರ್ಣ ಹಿಡಿತಕ್ಕೆ ಪಡೆಯುವ ಪಕ್ವ ಕಾಲ ಬಂದಿದೆ. ಲಿಂಗಾಯತ ನಾಯಕ ಯಡಿಯೂರಪ್ಪರನ್ನು ಮೂಲೆಯಲ್ಲಿ ಕೂರಿಸಿದ್ದಾಯ್ತು. ಹಿಂದುಳಿದ ವರ್ಗದ ಈಶ್ವರಪ್ಪರನ್ನು ಬಲವಂತವಾಗಿ ರಿಟೈರ್ಡ್ ಮಾಡಿದ್ದಾಯ್ತು.
ಈಗ ಒಕ್ಕಲಿಗ ಸದಾನಂದಗೌಡರೂ ಹೈಕಮಾಂಡ್ ನಿಂದ ಅವಮಾನಕ್ಕೊಳಗಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಸಂತೋಷ ಕೂಟದ ಕಲ್ಲೇಟಿಗೆ ಎಲ್ಲಾ ಹಕ್ಕಿಗಳೂ ಉದುರಿ ಬೀಳುತ್ತಿವೆ! ಕುಮಾರಸ್ವಾಮಿಯವರು ಹೇಳಿದಂತೆ ಇನ್ಮುಂದೆ ಬಿಜೆಪಿಯಲ್ಲಿ ಪೇಶ್ವೆ ವಂಶಸ್ಥರದ್ದೇ ಪಾರುಪತ್ಯ.! ಹೀಗೆಂದು ರಾಜ್ಯ ಕಾಂಗ್ರೆಸ್, ಬಿಜೆಪಿ ನಾಯಕರನ್ನು ಕಾಲೆಳೆಯುವ ಯತ್ನ ಮಾಡಿದೆ.

ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳಿಸಿದ್ದರಿಂದ ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. "ಸಂತೋಷ ಕೂಟ"ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ. ಎಲ್ಲಾ ತಲೆಗಳನ್ನೂ ಉರುಳಿಸಿ "ನಾಯಕತ್ವ ಮುಕ್ತ ಬಿಜೆಪಿ" ಮಾಡುವಲ್ಲಿ ಸಂತೋಷ ಕೂಟ ಯಶಸ್ವಿಯಾಗಿದೆ.
ಹರಿದ ಪಂಚೆಯಂತಾಗಿರುವ ಬಿಜೆಪಿಯಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ, ವಲಸಿಗರಿಗೆ ಆಪರೇಷನ್ ಕಮಲ ಮಾಡುವಾಗ ಜಾಮೂನ್ ಕೊಟ್ಟ ಬಿಜೆಪಿ ಈಗ ವಿಷ ಕೊಡುತ್ತಿದೆಯಂತೆ, ಹೀಗೆ ಹೇಳಿದ್ದು ಸ್ವತಃ ಬಿಜೆಪಿಯ ಎಸ್ ಟಿ ಸೋಮಶೇಖರ್! ಬಿಜೆಪಿ ಕಚೇರಿಯಲ್ಲಿ ಯಾರು ಯಾರಿಗೆ ವಿಷ ಬೆರೆಸುತ್ತಿದ್ದಾರೋ, ಮದ್ದು ಅರೆಯುತ್ತಿದ್ದಾರೋ! ಇತ್ತ ಕೆ ಎಸ್ ಈಶ್ವರಪ್ಪ ಎಂಬ ಕೆಲಸವಿಲ್ಲದ ರಿಟೈರ್ಡ್ ರಾಜಕಾರಿಣಿ ವಲಸಿಗರ ವಿರುದ್ಧ ನಾಲಿಗೆ ಮಸೆಯುತ್ತಿದ್ದಾರೆ. ಒಟ್ಟಿನಲ್ಲಿ #BJPvsBJP ಕಿತ್ತಾಟ ಎಂಬುದು ಮುಗಿಯದ ಧಾರಾವಾಹಿ!
ಜೆಡಿಎಸ್, ಬಿಜೆಪಿ ಮೈತ್ರಿ ಬಿಜೆಪಿ ನಾಯಕರಿಗೆ, ಜೆಡಿಎಸ್ ಶಾಸಕರಿಗೆ "ಒಲ್ಲದ ಸಂಸಾರ ಒತ್ತಾಯದ ಬಾಳ್ವೆ"ಯಂತಾಗಿದೆ. ಜೆಡಿಎಸ್ ಶಾಸಕರು ಬಿಜೆಪಿಯೊಂದಿಗಿನ ಮೈತ್ರಿ ಆತ್ಮಹತ್ಯೆಗೆ ಸಮ ಎಂದು ತಿಳಿದಿದ್ದಾರೆ, ಇತ್ತ ಬಿಜೆಪಿ ನಾಯಕರು ಕುಮಾರಸ್ವಾಮಿ ನಮ್ಮ ಜಾಗವನ್ನು ಅತಿಕ್ರಮಿಸಿಸುತ್ತಿದ್ದಾರೆ ಎಂದು ಒಳಗೊಳಗೇ ಕೈ ಹಿಸುಕುತ್ತಿದ್ದಾರೆ.
ಶರಣಗೌಡ ಕಂದನೂರು ಹಾಗೂ ಸದಾನಂದಗೌಡರ ಮಾತುಗಳಲ್ಲೇ ಈ ಸಂಗತಿ ಬೆಳಕಿಗೆ ಬಂದಿದೆ. ಒಟ್ಟಿನಲ್ಲಿ ಮೈತ್ರಿಗೆ ಖಾತ್ರಿ ಇಲ್ಲದೆ ಕತ್ತರಿ ಬೀಳುವ ಕಾಲ ಸನ್ನಿಹಿತವಾಗಿದೆ ಎಂದು ಟ್ವೀಟ್ ಮೂಲಕ ಟೀಕೆ ಮಾಡಿದೆ.
The BJP's party game is heading for victory and the time has come to take full control of the BJP. Lingayat leader BS Yediyurappa was made to sit in a corner. Eshwarappa, who belongs to the backward class, was forcibly retired.
19-01-26 03:33 pm
HK News Desk
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm