ಬ್ರೇಕಿಂಗ್ ನ್ಯೂಸ್
10-11-23 01:39 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಚರ್ಚೆ ನಡೆಸಿದರು.
ಮಂಗಳೂರು - ಬೆಂಗಳೂರು ಹಸಿರುವ ವಲಯ ಹೈ ಸ್ಪೀಡ್ ಕಾರಿಡಾರ್ ಮಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ಮಾರ್ಗ ಮಧ್ಯೆ ಬರುವ ಇತರ ನಗರಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. 6 ರಿಂದ 8 ಲೈನ್ ಹೈಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಪ್ರಾರಂಭಿಕ ಹಂತವಾಗಿ ಸಚಿವರೊಂದಿಗೆ ಸಂಸ್ಥೆಯ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೈ ಸ್ಪೀಡ್ ಕಾರಿಡಾರ್ ಮಂಗಳೂರಿಗೆ ಹೆಚ್ಚಿನ ಬಂಡವಾಳವನ್ನ ತರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರಿಡಾರ್ ರಸ್ತೆ ಮಂಗಳೂರು ಪೋರ್ಟ್ ಗೂ ಕನೆಕ್ಟ್ ಮಾಡುವುದರಿಂದ ವ್ಯಾಪಾರ ಉದ್ಯಮಗಳ ಬೆಳವಣಿಗೆಗೆ ನೆರವಾಗಲಿದೆ ಎಂದರು.
ಕಾರಿಡಾರ್ ರೋಡ್ ಮ್ಯಾಪ್ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭರವಸೆ ನೀಡಿದರು. ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನ ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The head of The European Institute of Business and Technology held discussions with Dakshina Kannada district in-charge minister Dinesh Gundu Rao and Udupi district in-charge minister Lakshmi Hebbalkar on the construction of mangaluru integrated greenfield high-speed corridor.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm