ಬ್ರೇಕಿಂಗ್ ನ್ಯೂಸ್
11-11-23 07:00 pm HK News Desk ಕರ್ನಾಟಕ
ಮಂಜೇಶ್ವರ, ನ.11: ಕರ್ನಾಟಕ ಗಡಿಭಾಗ ತಲಪಾಡಿಯಿಂದ ಕೇರಳದ ಕಾಸರಗೋಡಿನಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಇದೇ ವೇಳೆ, ತಲಪಾಡಿ, ಮಂಜೇಶ್ವರ ಭಾಗದಲ್ಲಿ ಬಹುತೇಕ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು ಹೊಸ ರಸ್ತೆಯಲ್ಲಿ ಬಸ್ಸು, ಇನ್ನಿತರ ವಾಹನಗಳು ಓಡಾಟ ಆರಂಭಿಸಿವೆ. ಆದರೆ ಇಲ್ಲೊಬ್ಬರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸಿಗೆ ಅಡ್ಡಲಾಗಿ ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿರುವ ಪ್ರಸಂಗದ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹೊಸ ಹೆದ್ದಾರಿಯ ಮಧ್ಯದಲ್ಲೇ ಸಾಗುತ್ತಿತ್ತು. ಬಸ್ ಇಕ್ಕೆಲದಲ್ಲಿ ನಿರ್ಮಿಸಿರುವ ಸರ್ವಿಸ್ ರಸ್ತೆಯಲ್ಲಿ ಸಾಗದೇ ಇದ್ದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಕುಂಜತ್ತೂರಿನ ಉದ್ಯಮಿ ಹಸೈನಾರ್ ಎಂಬವರು ರಸ್ತೆ ಮಧ್ಯೆ ಸ್ಟೂಲ್ ಇಟ್ಟು ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಿನಿಮೀಯ ಶೈಲಿಯಲ್ಲಿ ಆ ವ್ಯಕ್ತಿ ಕುರ್ಚಿಯಿಂದ ಎದ್ದು ಬಸ್ಸಿನ ಎದುರಿನಲ್ಲಿ ನಡೆದು ಸಾಗುವ ವಿಡಿಯೋ ಜನಮೆಚ್ಚುಗೆ ಗಳಿಸಿದೆ.




ತಲಪಾಡಿಯಿಂದ ಕಾಸರಗೋಡು- ಕಣ್ಣೂರಿನ ವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಲ್ಲಿ ನಡುವೆ ಸಾಗುವ ವಾಹನಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಸಾಗುವಂತೆ ಪ್ರತ್ಯೇಕ ರಸ್ತೆಯನ್ನು ಮಾಡಲಾಗಿದೆ. ಇದರಿಂದಾಗಿ ಸ್ಥಳೀಯ ಪ್ರಯಾಣಿಕರು, ಜನಸಾಮಾನ್ಯರು ಹೆದ್ದಾರಿಯನ್ನು ಆಚೀಚೆ ದಾಟುವುದಕ್ಕೂ ಆಗಲ್ಲ. ಒಂದೆಡೆ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದ್ದರೂ, ನೇರವಾಗಿ ಸಾಗುವ ವಾಹನ ಪ್ರಯಾಣಿಕರಿಗೆ ಯಾವುದೇ ಕಿರಿಕಿರಿ ಇಲ್ಲದೆ ಸಾಗಬಹುದಾಗಿದೆ. ಸ್ಥಳೀಯ ವಾಹನಗಳು, ಸಾರಿಗೆ ಬಸ್ ಗಳು ಸಾಗುವುದಕ್ಕೆ ಸರ್ವಿಸ್ ರಸ್ತೆಯನ್ನು ಮಾಡಲಾಗಿದೆ. ಆದರೆ ಕೆಲವೊಮ್ಮೆ ನೇರ ರಸ್ತೆಯಲ್ಲೇ ಬಸ್ಸುಗಳು ಸಾಗುವುದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಈ ರೀತಿ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ.
Kasargod man sits on chair in the middle of National Highway between Mangalore and kerala.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm