ಬ್ರೇಕಿಂಗ್ ನ್ಯೂಸ್
11-11-23 07:35 pm Bangalore Correspondent ಕರ್ನಾಟಕ
ಬೆಂಗಳೂರು, ನ.11: ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ ಬೆನ್ನಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಾರಾಗುತ್ತಾರೆ ಎಂಬ ಕುತೂಹಲ ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೊಸ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನ.17ರಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದಿದ್ದಾರೆ.
ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ದೂರವಾಣಿ ಕರೆ ಮಾಡಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಆಶೀರ್ವಾದ ಪಡೆದಿದ್ದೇನೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದೇನೆ. ನ.17ರಂದು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಸೂಚಿಸಿದ್ದಾರೆ. ಕೇಂದ್ರದ ವೀಕ್ಷಕರೂ ಸಭೆಗೆ ಆಗಮಿಸಲಿದ್ದು ಎಲ್ಲ ಶಾಸಕರ ಅಭಿಪ್ರಾಯ ಪಡೆದು ನೂತನ ನಾಯಕನ ಆಯ್ಕೆ ಮಾಡಲಾಗುವುದು ಎಂದು ವಿಜಯೇಂದ್ರ ತಿಳಿಸಿದ್ದಾರೆ.


ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರು ಕೇಳಿಬರುತ್ತಿದ್ದರೂ, ಲಿಂಗಾಯತ ಸಮುದಾಯದ ವಿಜಯೇಂದ್ರ ಅಧ್ಯಕ್ಷನಾಗಿ ನೇಮಕ ಆಗಿರುವುದರಿಂದ ಪ್ರತಿಪಕ್ಷ ನಾಯಕನ ಆಯ್ಕೆಗೆ ಲೆಕ್ಕಾಚಾರ ಬದಲಾಗಲಿದೆ. ಹಿಂದಿನ ಸರಕಾರದಲ್ಲಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರೆ, ಈಗ ಅದೇ ಸಮುದಾಯದ ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮುದಾಯ ಹೊರತುಪಡಿಸಿ ಅನ್ಯ ಸಮುದಾಯದ ಪ್ರಭಾವಿ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ.
ಜೆಡಿಎಸ್, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಬೆಂಬಲಿಸಿರುವುದರಿಂದ ಅದರ ಶಾಸಕಾಂಗ ಪಕ್ಷದ ನಾಯಕನಾಗಿ ಎಚ್ ಡಿ ಕುಮಾರಸ್ವಾಮಿ ಒಕ್ಕಲಿಗರೇ ಇದ್ದಾರೆ. ಹಾಗಾಗಿ ಮೈತ್ರಿ ಪಕ್ಷ ಬಿಜೆಪಿಯಲ್ಲಿ ಅದೇ ಸಮುದಾಯದ ಮತ್ತೊಬ್ಬ ವ್ಯಕ್ತಿ ವಿಪಕ್ಷ ನಾಯಕನಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಈ ಸ್ಥಾನಕ್ಕೆ ಹಿಂದುಳಿದ ವರ್ಗ ಅಥವಾ ಪರಿಶಿಷ್ಟ ವರ್ಗದ ಪ್ರಭಾವಿ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ. ವಿಧಾನ ಪರಿಷತ್ತಿನಲ್ಲಿ ಕಳೆದ ಬಾರಿ ಹಿರಿಯ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇದ್ದರು. ವಿಧಾನಸಭೆಗೆ ಯಾರನ್ನು ನೇಮಕ ಮಾಡುತ್ತಾರೆ ಅದನ್ನು ಆಧರಿಸಿ ಕೋಟ ಸ್ಥಾನ ನಿರ್ಧಾರವಾಗಲಿದೆ. ವಿಧಾನಸಭೆ ನಾಯಕನಾಗಿ ಹಿಂದುಳಿದ ವರ್ಗದಲ್ಲಿ ಸುನಿಲ್ ಕುಮಾರ್ ಗೆ ಸ್ಥಾನ ಲಭಿಸುವ ಸಾಧ್ಯತೆಯೂ ಇದೆ.
With the appointment of a new president of the state BJP, there is a lot of curiosity as to who will be the leader of the BJP legislature party. The new state president B Y Vijayendra said that the new leader will be elected at the legislature party meeting to be held on November 17.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm