ಬ್ರೇಕಿಂಗ್ ನ್ಯೂಸ್
13-11-23 02:07 pm HK News Desk ಕರ್ನಾಟಕ
ಕಲಬುರಗಿ, ನ.14: ರೈಲ್ವೇ ನಿಲ್ದಾನದ ಪ್ಲಾಟ್ ಫಾರ್ಮ್ನಲ್ಲಿ ನಿಂತಿದ್ದ ರೈಲ್ವೆ ಬೋಗಿಗೆ ವ್ಯಕ್ತಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವರದಿಯಾಗಿದೆ.
ಸೋಲಾಪುರ ನಗರದ ನಿವಾಸಿ ಮಲ್ಲಿನಾಥ ಸಿದ್ದಪ್ಪ ದೋಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಸಿದ್ದಪ್ಪ ವಾಡಿ ರೈಲ್ವೆಯ ಎಸ್ ಎನ್ ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕೆಲ ದಿನಗಳಿಂದ ಕೆಲಸಕ್ಕೆ ಗೈರು ಹಾಜರಿ ಆಗಿದ್ದ ಸಿದ್ದಪ್ಪ ಕಾಣೆಯಾಗಿದ್ದಾನೆ ಎಂದು ಪೋಷಕರು ಇತ್ತೀಚೆಗೆ ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆ ರವಿವಾರ ರಾಯಚೂರು ನಗರದಲ್ಲಿ ಪತ್ತೆ ಹಚ್ಚಿ, ವಾಡಿ ಪೊಲೀಸ್ ಠಾಣೆಗೆ ಕರೆ ತಂದು ಪೋಷಕರಿಗೆ ಒಪ್ಪಿಸಿದ್ದರು.
ಸೋಮವಾರ ಬೆಳಗ್ಗೆ ವಾಡಿ ರೈಲ್ವೆ ಪ್ಲಾಟ್ ಫಾರ್ಮ್ 1 ರಲ್ಲಿ ಕರ್ಮಚಾರಿ ರೈಲು ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಪಿಎಸ್'ಐ ಮಹ್ಮೂದ್ ಪಾಶಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly committed suicide by hanging himself from a railway coach parked on the platform of a railway station at Wadi town in Chittapur taluk. The deceased has been identified as Mallinath Siddappa Doshetty (38), a resident of Solapur city. The deceased, Siddappa Wadi, was working in the SNT division of the railways.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm