ಬ್ರೇಕಿಂಗ್ ನ್ಯೂಸ್
13-11-23 08:12 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಐದು ರಾಜ್ಯಗಳ ಚುನಾವಣೆ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳನ್ನು ಬದಲಿಸಲು ಪಕ್ಷ ಚಿಂತನೆ ನಡೆಸಿದೆ ಎಂದವರು ಹೇಳಿದ್ದಾರೆ.
ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಯುವ ನಾಯಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಪಕ್ಷದ ರಾಜ್ಯ ಘಟಕದ ಪುನಶ್ಚೇತನಕ್ಕೆ ಮುಂದಾಗಿದೆ. ಲೋಕಸಭೆ ಚುನಾವಣೆ ವರೆಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಮೂವರು ಸಚಿವರಾಗಿರುವ ಕಾರಣ ಪಕ್ಷದ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಐದು ರಾಜ್ಯಗಳ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ನಾವು ಈಗ ಸಚಿವರಾಗಿರುವ ಕಾರಣ ನಮ್ಮನ್ನು ಬಿಡುಗಡೆ ಮಾಡುವಂತೆ ಹೈಕಮಾಂಡ್ಗೆ ಕೇಳಿದ್ದೇವೆ. ನಾವು ಈಗಾಗಲೇ ಶಿಫಾರಸುಗಳನ್ನು ಕಳುಹಿಸಿದ್ದೇವೆ. ಐದು ರಾಜ್ಯಗಳ ಚುನಾವಣೆ ನಂತರ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಎಂಎಲ್ಸಿ ಸಲೀಂ ಅಹಮದ್ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲದೆ, 20 ಜಿಲ್ಲಾಧ್ಯಕ್ಷರ ಸ್ಥಾನವನ್ನು ಲೋಕಸಭೆ ಚುನಾವಣೆಗೂ ಮುನ್ನ ಬದಲಾಯಿಸಲು ಪಕ್ಷ ಮುಂದಾಗಿದೆ.
“We are planning to field one Lingayat and one Kuruba community candidate in the coming Lok Sabha polls in Belagavi district,” Public Works Minister Satish Jarkiholi said in Belagavi on Monday.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm