ಬ್ರೇಕಿಂಗ್ ನ್ಯೂಸ್
14-11-23 02:57 pm Bangalore Correspondent ಕರ್ನಾಟಕ
ಬೆಂಗಳೂರು, ನ 14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಕರೆ ಬಂದಿದ್ದು, ಆತಂಕದಲ್ಲಿ ಖಾಸಗಿ ಕಂಪನಿ ಉದ್ಯೋಗಿಗಳು ಹೊರಬಂದಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಟಿಸಿಎಸ್ ಕಂಪನಿಗೆ ಅನಾಮಧೇಯ ವ್ಯಕ್ತಿಯೋರ್ವ ಬಾಂಬ್ ಇದೆ ಎಂದು ಕರೆ ಮಾಡಿ ಹೇಳಿದ್ದಾನೆ. ಇದರಿಂದ ಕೆಲ ಹೊತ್ತು ಕಂಪನಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಟಿಸಿಎಸ್ ಕಂಪನಿಯ ಬಿ.ಬ್ಲಾಕ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬರುತ್ತಿದ್ದಂತೆ ವಿಷಯ ತಿಳಿದ ಉದ್ಯೋಗಿಗಳು ಆತಂಕದಿಂದ ಹೊರ ಬಂದಿದ್ದಾರೆ. ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಕಂಪನಿಯವರು ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ತನಿಖೆ ವೇಳೆ ಈ ಹಿಂದೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಮಹಿಳಾ ಮಾಜಿ ಉದ್ಯೋಗಿ ಹೆಚ್ಚಿನ ವಿಧ್ಯಾಭ್ಯಾಸಕ್ಕಾಗಿ ಕೆಲಸ ಬಿಟ್ಟು ಹೋಗಿದ್ದರು. ವಿದ್ಯಾಭ್ಯಾಸ ಬಳಿಕ ರೀ ಜಾಯಿನ್ ಮಾಡಿಕೊಳ್ಳುವಂತೆ ಕಂಪನಿಗೆ ಮಹಿಳೆ ಮನವಿ ಮಾಡಿದ್ದಾರೆ, ಆದರೆ, ಇದಕ್ಕೆ ಕಂಪನಿ ಹಿಂದೇಟು ಹಾಕಿದೆ.
ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ ಮಹಿಳೆ ಕಂಪನಿ ಮೇಲಿನ ದ್ವೇಷಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಾರೆ. ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನಿಂದ ತಪಾಸಣೆ ಬಳಿಕ ಹುಸಿ ಕರೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಮಹಿಳೆಯನ್ನು ವಶಕ್ಕೆ ಪಡೆಯಲು ಬೆಂಗಳೂರಿನಿಂದ ಬೆಳಗಾವಿಗೆ ಪೊಲೀಸರ ತಂಡ ಆಗಮಿಸುತ್ತಿದೆ
In yet another shocking incident, employees of a private company in Bengaluru have come out in panic after receiving a hoax bomb call. An unidentified person called electronic city TCS and told them that there was a bomb. This created panic in the company for some time.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm