ಬ್ರೇಕಿಂಗ್ ನ್ಯೂಸ್
14-11-23 02:57 pm Bangalore Correspondent ಕರ್ನಾಟಕ
ಬೆಂಗಳೂರು, ನ 14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಕರೆ ಬಂದಿದ್ದು, ಆತಂಕದಲ್ಲಿ ಖಾಸಗಿ ಕಂಪನಿ ಉದ್ಯೋಗಿಗಳು ಹೊರಬಂದಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಟಿಸಿಎಸ್ ಕಂಪನಿಗೆ ಅನಾಮಧೇಯ ವ್ಯಕ್ತಿಯೋರ್ವ ಬಾಂಬ್ ಇದೆ ಎಂದು ಕರೆ ಮಾಡಿ ಹೇಳಿದ್ದಾನೆ. ಇದರಿಂದ ಕೆಲ ಹೊತ್ತು ಕಂಪನಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಟಿಸಿಎಸ್ ಕಂಪನಿಯ ಬಿ.ಬ್ಲಾಕ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬರುತ್ತಿದ್ದಂತೆ ವಿಷಯ ತಿಳಿದ ಉದ್ಯೋಗಿಗಳು ಆತಂಕದಿಂದ ಹೊರ ಬಂದಿದ್ದಾರೆ. ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಕಂಪನಿಯವರು ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ತನಿಖೆ ವೇಳೆ ಈ ಹಿಂದೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಮಹಿಳಾ ಮಾಜಿ ಉದ್ಯೋಗಿ ಹೆಚ್ಚಿನ ವಿಧ್ಯಾಭ್ಯಾಸಕ್ಕಾಗಿ ಕೆಲಸ ಬಿಟ್ಟು ಹೋಗಿದ್ದರು. ವಿದ್ಯಾಭ್ಯಾಸ ಬಳಿಕ ರೀ ಜಾಯಿನ್ ಮಾಡಿಕೊಳ್ಳುವಂತೆ ಕಂಪನಿಗೆ ಮಹಿಳೆ ಮನವಿ ಮಾಡಿದ್ದಾರೆ, ಆದರೆ, ಇದಕ್ಕೆ ಕಂಪನಿ ಹಿಂದೇಟು ಹಾಕಿದೆ.
ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ ಮಹಿಳೆ ಕಂಪನಿ ಮೇಲಿನ ದ್ವೇಷಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಾರೆ. ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನಿಂದ ತಪಾಸಣೆ ಬಳಿಕ ಹುಸಿ ಕರೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಮಹಿಳೆಯನ್ನು ವಶಕ್ಕೆ ಪಡೆಯಲು ಬೆಂಗಳೂರಿನಿಂದ ಬೆಳಗಾವಿಗೆ ಪೊಲೀಸರ ತಂಡ ಆಗಮಿಸುತ್ತಿದೆ
In yet another shocking incident, employees of a private company in Bengaluru have come out in panic after receiving a hoax bomb call. An unidentified person called electronic city TCS and told them that there was a bomb. This created panic in the company for some time.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm