ಬ್ರೇಕಿಂಗ್ ನ್ಯೂಸ್
15-11-23 11:38 am Bangalore Correspondent ಕರ್ನಾಟಕ
ಬೆಂಗಳೂರು, ನ 15: ಬಿಗ್ ಬಾಸ್ ಕನ್ನಡ ಸೀಸನ್ 10 ನಲ್ಲಿ ಸ್ಪರ್ಧಿಯಾಗಿರುವ ಆಧುನಿಕ ಕೃಷಿಕ ವರ್ತೂರು ಸಂತೋಷ್ ವಿರುದ್ಧ ಕಳೆದ ಕೆಲ ದಿನಗಳ ಹಿಂದೆ ಹುಲಿ ಉಗುರು ಧರಿಸಿದ್ದಕ್ಕೆ ದೂರು ದಾಖಲಾಗಿತ್ತು. ತೀವ್ರ ವಿಚಾರಣೆ ಬಳಿಕ ವರ್ತೂರು ಅವರಿಗೆ ಜಾಮೀನು ಸಿಕ್ಕಿದೆ.
ಇದೀಗ ಬಿಗ್ ಬಾಸ್ ನ ಮತ್ತೊಬ್ಬ ಸ್ಪರ್ಧಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಿರುತೆರೆ ನಟಿಯಾಗಿ , ಸಿನಿಮಾಗಳಲ್ಲೂ ನಟಿಸಿರುವ ತನಿಷಾ ಕುಪ್ಪಂಡ ಈ ಬಾರಿಯ ಬಿಗ್ ಬಾಸ್ ನಲ್ಲಿ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.

ಇದೀಗ ತನಿಷಾ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.
ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.
ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕೆಂದು ಎಸ್ ಸಿ ಎಸ್ಟಿ ಕಾಯ್ದೆಡಿ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲಾಗಿದೆ.

ಯಾವಾಗ ಪದ ಬಳಕೆ ಮಾಡಲಾಯ್ತು?
'ಇದು ಗೊಂಬೆ ಆಟವಯ್ಯ' ಎಂಬ ಟಾಸ್ಕ್ನಲ್ಲಿ ಸ್ಪರ್ಧಿಗಳು ತಮ್ಮ ಎದುರಾಳಿ ಸ್ಪರ್ಧಿಗಳ ಭಾವನೆಗಳನ್ನು ವ್ಯಕ್ತಪಡಿಸುವ ಹಾಗೆ ಮಾಡಬೇಕಿತ್ತು ಎಂದು ಹೇಳಲಾಗಿತ್ತು. ಆಗ ಪ್ರತಾಪ್ ಅವರು ಉಸ್ತುವಾರಿಯಾಗಿದ್ದರು. ಪ್ರತಾಪ್ ಅವರು ಎದುರಾಳಿ ತಂಡದ ತಪ್ಪುಗಳನ್ನು ಸರಿಯಾಗಿ ಮೆನ್ಶನ್ ಮಾಡಿಲ್ಲ ಅಂತ ವರ್ತೂರು ಸಂತೋಷ್, ತನಿಷಾ, ಮೈಕಲ್ ಅವರು ಆರೋಪ ಮಾಡಿದ್ದರು. ಈ ವಿಚಾರವಾಗಿ ಒಂದಷ್ಟು ಜಗಳ ನಡೆದಿದೆ.
ಇದೀಗ ಪೊಲೀಸರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವರ್ತೂರು ಸಂತೋಷ್ ನಂತರ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜೈಲು ಸೇರುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ. ತನಿಷಾ ವಿಚಾರಣೆ ಬಳಿಕ ಬಿಗ್ ಬಾಸ್ ಸ್ಪರ್ಧಿಯನ್ನು ಪೊಲೀಸರು ಬಂಧಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಸ್ಯಾಂಡಲ್ ವುಡ್ ನಲ್ಲಿ ʼಬಾಡಿಗಾಡ್ʼ, ʼಉಂಡೆನಾಮ. ʼಪೆಂಟಗನ್ʼ ಮುಂತಾದ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರಗೂ ಎದುರಾಗಿತ್ತು ಸಂಕಷ್ಟ!
ಇತ್ತೀಚೆಗೆ ನಟ, ನಿರ್ದೇಶಕ ಉಪೇಂದ್ರ, ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಆಕ್ಷೇಪಾರ್ಹ ಪದವೊಂದನ್ನು ಬಳಕೆ ಮಾಡಿ ಸಂಕಷ್ಟಕ್ಕೆ ಸಿಲುಕಿದ್ರು. ಉಪೇಂದ್ರ ವಿರುದ್ಧ ದಲಿತಪರ ಸಂಘಟನೆಗಳು ದೂರು ನೀಡಿದ್ದವು. ಬಳಿಕ ನಟ ಉಪೇಂದ್ರ ಸೋಶಿಯಲ್ ಮೀಡಿಯಾದ ಮೂಲಕ ಕ್ಷಮೆಯನ್ನೂ ಸಹ ಕೇಳಿದ್ದರು.
FIR filed against contestant Tanisha Kuppanda under SC/ST atrocities act for allegedly using derogatory language against Bhovi community.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm