ಬ್ರೇಕಿಂಗ್ ನ್ಯೂಸ್
15-11-23 11:38 am Bangalore Correspondent ಕರ್ನಾಟಕ
ಬೆಂಗಳೂರು, ನ 15: ಬಿಗ್ ಬಾಸ್ ಕನ್ನಡ ಸೀಸನ್ 10 ನಲ್ಲಿ ಸ್ಪರ್ಧಿಯಾಗಿರುವ ಆಧುನಿಕ ಕೃಷಿಕ ವರ್ತೂರು ಸಂತೋಷ್ ವಿರುದ್ಧ ಕಳೆದ ಕೆಲ ದಿನಗಳ ಹಿಂದೆ ಹುಲಿ ಉಗುರು ಧರಿಸಿದ್ದಕ್ಕೆ ದೂರು ದಾಖಲಾಗಿತ್ತು. ತೀವ್ರ ವಿಚಾರಣೆ ಬಳಿಕ ವರ್ತೂರು ಅವರಿಗೆ ಜಾಮೀನು ಸಿಕ್ಕಿದೆ.
ಇದೀಗ ಬಿಗ್ ಬಾಸ್ ನ ಮತ್ತೊಬ್ಬ ಸ್ಪರ್ಧಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಿರುತೆರೆ ನಟಿಯಾಗಿ , ಸಿನಿಮಾಗಳಲ್ಲೂ ನಟಿಸಿರುವ ತನಿಷಾ ಕುಪ್ಪಂಡ ಈ ಬಾರಿಯ ಬಿಗ್ ಬಾಸ್ ನಲ್ಲಿ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.

ಇದೀಗ ತನಿಷಾ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.
ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.
ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕೆಂದು ಎಸ್ ಸಿ ಎಸ್ಟಿ ಕಾಯ್ದೆಡಿ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲಾಗಿದೆ.

ಯಾವಾಗ ಪದ ಬಳಕೆ ಮಾಡಲಾಯ್ತು?
'ಇದು ಗೊಂಬೆ ಆಟವಯ್ಯ' ಎಂಬ ಟಾಸ್ಕ್ನಲ್ಲಿ ಸ್ಪರ್ಧಿಗಳು ತಮ್ಮ ಎದುರಾಳಿ ಸ್ಪರ್ಧಿಗಳ ಭಾವನೆಗಳನ್ನು ವ್ಯಕ್ತಪಡಿಸುವ ಹಾಗೆ ಮಾಡಬೇಕಿತ್ತು ಎಂದು ಹೇಳಲಾಗಿತ್ತು. ಆಗ ಪ್ರತಾಪ್ ಅವರು ಉಸ್ತುವಾರಿಯಾಗಿದ್ದರು. ಪ್ರತಾಪ್ ಅವರು ಎದುರಾಳಿ ತಂಡದ ತಪ್ಪುಗಳನ್ನು ಸರಿಯಾಗಿ ಮೆನ್ಶನ್ ಮಾಡಿಲ್ಲ ಅಂತ ವರ್ತೂರು ಸಂತೋಷ್, ತನಿಷಾ, ಮೈಕಲ್ ಅವರು ಆರೋಪ ಮಾಡಿದ್ದರು. ಈ ವಿಚಾರವಾಗಿ ಒಂದಷ್ಟು ಜಗಳ ನಡೆದಿದೆ.
ಇದೀಗ ಪೊಲೀಸರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವರ್ತೂರು ಸಂತೋಷ್ ನಂತರ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜೈಲು ಸೇರುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ. ತನಿಷಾ ವಿಚಾರಣೆ ಬಳಿಕ ಬಿಗ್ ಬಾಸ್ ಸ್ಪರ್ಧಿಯನ್ನು ಪೊಲೀಸರು ಬಂಧಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಸ್ಯಾಂಡಲ್ ವುಡ್ ನಲ್ಲಿ ʼಬಾಡಿಗಾಡ್ʼ, ʼಉಂಡೆನಾಮ. ʼಪೆಂಟಗನ್ʼ ಮುಂತಾದ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರಗೂ ಎದುರಾಗಿತ್ತು ಸಂಕಷ್ಟ!
ಇತ್ತೀಚೆಗೆ ನಟ, ನಿರ್ದೇಶಕ ಉಪೇಂದ್ರ, ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಆಕ್ಷೇಪಾರ್ಹ ಪದವೊಂದನ್ನು ಬಳಕೆ ಮಾಡಿ ಸಂಕಷ್ಟಕ್ಕೆ ಸಿಲುಕಿದ್ರು. ಉಪೇಂದ್ರ ವಿರುದ್ಧ ದಲಿತಪರ ಸಂಘಟನೆಗಳು ದೂರು ನೀಡಿದ್ದವು. ಬಳಿಕ ನಟ ಉಪೇಂದ್ರ ಸೋಶಿಯಲ್ ಮೀಡಿಯಾದ ಮೂಲಕ ಕ್ಷಮೆಯನ್ನೂ ಸಹ ಕೇಳಿದ್ದರು.
FIR filed against contestant Tanisha Kuppanda under SC/ST atrocities act for allegedly using derogatory language against Bhovi community.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm