ಬ್ರೇಕಿಂಗ್ ನ್ಯೂಸ್
15-11-23 04:54 pm Bangalore Correspondent ಕರ್ನಾಟಕ
ಬೆಂಗಳೂರು, ನ.15: ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 24, 25 ಮತ್ತು 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ - ಭಾಷಾ ಸಂಘಟನೆಗಳ ಜೊತೆ ಬೃಹತ್ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಕರಾವಳಿಯ ವಿವಿಧ ಭಾಷೆ - ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ತಯಾರಿ ನಡೆಸುತ್ತಿವೆ. ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. 'ಬೆಂಗಳೂರು ಕಂಬಳ ನಮ್ಮ ಕಂಬಳ' ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್ನಲ್ಲಿ ಮೂಡಿ ಬಂದಿದೆ.

ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನವೆಂಬರ್ 23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳುಹಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೇ ಪ್ರತಿ ತಾಲೂಕಿನಲ್ಲೂ ಸ್ವಾಗತ - ಬೀಳ್ಕೊಡುಗೆ ಇರಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
First Kambala in Bangalore, Aishwarya Rai and Anushka Shetty to take part. The Bengaluru Carpet Committee, led by President Ashok Kumar Rai, announced the upcoming “Bengaluru Kambala-Namma Kambala” event at the palace grounds in Bangalore. The event, scheduled for the 25th and 26th, is expected to draw over 7 lakh attendees.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm