ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm