ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm