ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm