ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm