ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm