ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm