ಬ್ರೇಕಿಂಗ್ ನ್ಯೂಸ್
20-11-23 07:00 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಕಾಂತಾರ - 2 ಚಿತ್ರ ಶೀಘ್ರದಲ್ಲೇ ಬರಲಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಚಿತ್ರದ ಕತೆಯ ಬಗ್ಗೆಯೂ ಕಾಂತಾರ ಚಿತ್ರ ಕತೆಗಿಂತಲೂ ಹಿಂದಿನದ್ದು ಎಂದು ಹೇಳಿ ಕುತೂಹಲ ಹುಟ್ಟಿಸಿದ್ದರು. ಈಗ ಆ ಕತೆ ಯಾವುದು ಎನ್ನುವ ಸಣ್ಣ ಸುಳಿವು ಹೊರ ಬಿದ್ದಿದೆ.
ತುಳುನಾಡಿನ ದೈವದ ಕಥೆಯನ್ನಿಟ್ಟುಕೊಂಡು ನಿರ್ಮಿಸಿದ್ದ ಕಾಂತಾರ ಪ್ಯಾನ್ ಇಂಡಿಯಾದಲ್ಲಿ ಹಿಟ್ ಆಗಿತ್ತು. ದೊಡ್ಡ ಯಶಸ್ಸಿನ ಬಳಿಕ ಸಿನಿಮಾದ ಎರಡನೇ ಭಾಗ ಅಂದರೆ ಪ್ರೀಕ್ವೆಲ್ ನ್ನು ತೆರೆಗೆ ತರುವುದಾಗಿ ರಿಷಬ್ ಶೆಟ್ಟಿ ಇದೇ ವರ್ಷದ ಫೆಬ್ರವರಿಯಲ್ಲಿ ಸಿನಿಮಾದ 100ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ಹೇಳಿದ್ದರು. ನೀವು ನೋಡಿರುವುದು ಸಿನಿಮಾದ 2ನೇ ಭಾಗ, ಮುಂದೆ ಬರಲಿರುವುದು ಸಿನಿಮಾದ ಮೊದಲ ಭಾಗ ಎಂದು ಹೇಳಿದ್ದು ಕುತೂಹಲಕ್ಕೀಡಾಗುವಂತೆ ಮಾಡಿತ್ತು.
ಸಿನಿಮಾದ ಚಿತ್ರೀಕರಣ ಹಾಗೂ ಸ್ಕ್ರಿಪ್ಟ್ ಬಗ್ಗೆ ರಿಷಬ್ ಸಾಕಷ್ಟು ತಯಾರಿ ನಡೆಸಿದ್ದಾರೆ. ಆದರೆ ಎರಡನೇ ಭಾಗದ ಕಥೆ ಏನು ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಿದೆ. ಕೆಲವು ಮಾಹಿತಿ ಪ್ರಕಾರ, ʼಕಾಂತಾರ-2ʼ ನಲ್ಲಿ ಪಂಜುರ್ಲಿ ದೈವದ ಮೂಲದ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 300-400ರ ಕಾಲದ ಕಥೆ ಇರಲಿದ್ದು ಪಂಜುರ್ಲಿ ದೈವದ ಹುಟ್ಟು ಹಾಗೂ ಬೆಳೆದುಬಂದ ಆಚರಣೆ ಕುರಿತ ಕಥೆ ಇರಲಿದೆ ಎನ್ನುವ ಸುಳಿವು ಸಿಕ್ಕಿದೆ.
ʼಕಾಂತಾರʼ ಚಿತ್ರದಲ್ಲಿ ತುಳುನಾಡಿನ ಆಚರಣೆ, ಸಂಪ್ರದಾಯಗಳು ಕಾಣಿಸಿಕೊಂಡಿದ್ದವು. ಸಂಪೂರ್ಣ ಚಿತ್ರೀಕರಣ ಕುಂದಾಪುರದ ರಿಷಬ್ ಶೆಟ್ಟಿ ಊರಿನಲ್ಲೇ ನಡೆದಿತ್ತು. ಚಿತ್ರಕ್ಕೆ ಸುಮಾರು 16 ಕೋಟಿ ರೂ. ಖರ್ಚು ಆಗಿತ್ತು. ʼಕಾಂತಾರ-2ʼ ಚಿತ್ರದ ಬಜೆಟ್ ಅದಕ್ಕೂ ಹೆಚ್ಚಿನದಾಗಿರಲಿದೆ. ಇದೇ ನವೆಂಬರ್ ಅಂತ್ಯಕ್ಕೆ ಉಡುಪಿಯಲ್ಲಿ ʼಕಾಂತಾರ-2ʼ ಸಿನಿಮಾದ ಮುಹೂರ್ತ ನೆರವೇರಲಿದೆ. ಮುಂದಿನ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯಿದೆ.
After the phenomenal success of 'Kantara', Rishab Shetty and team are all set for 'Kantara 2'. The film will be a prequel to the ever-successful first part. The film will go on the floors soon.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm