ಬ್ರೇಕಿಂಗ್ ನ್ಯೂಸ್
21-11-23 09:34 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ಬೆಂಗಳೂರು ಕಂಬಳಕ್ಕೆ ದೆಹಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಆಹ್ವಾನಿಸಿದ್ದು ವಿವಾದಕ್ಕೀಡಾಗುತ್ತಲೇ ಅವರನ್ನು ಆಹ್ವಾನಿತರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನ.25 ಮತ್ತು 26ರಂದು ನಡೆಯುವ ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿರುವಾಗಲೇ ಕಂಬಳ ಕೂಟಕ್ಕೆ ಹೆಣ್ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಕರೆಸಲಾಗಿದೆ ಎನ್ನುವ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸರಕಾರವೇ ಮುಂದೆ ನಿಂತು ಆಯೋಜಿಸುತ್ತಿರುವ ಕಂಬಳಕ್ಕೆ ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದನನ್ನು ಕರೆಸಿರುವುದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಕಾಂಗ್ರೆಸ್ ನಾಯಕರೇ ಕಟು ಟೀಕೆಯನ್ನು ಮಾಡಿದ್ದರು.

ಇದರ ಬೆನ್ನಲ್ಲೇ ಆಶೋಕ್ ರೈ ಹೇಳಿಕೆ ನೀಡಿದ್ದು, ಕಂಬಳ ಜನಪದ ಕ್ರೀಡೆಯಾಗಿದ್ದು ಇದೊಂದು ಮಹತ್ವದ ಕಾರ್ಯಕ್ರಮವೂ ಹೌದು. ಕಾರ್ಯಕ್ರಮಕ್ಕೆ ಬೇರೆ ಬೇರೆ ಸಂಘಟನೆಗಳು ತಮ್ಮ ನಾಯಕರನ್ನು ಕರೆಸಲು ಆಹ್ವಾನ ನೀಡಿವೆ. ಪುನೀತ್ ರಾಜಕುಮಾರ್ ಅಭಿಮಾನಿಗಳ ಬೇಡಿಕೆಯಂತೆ ವೇದಿಕೆಗೆ ನಟ ಪುನೀತ್ ಹೆಸರಿನ್ನಿಡಲಾಗಿದೆ. ಸಿದ್ಧಿ ಜನಾಂಗದವರು ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕರೆಸಲು ಹೇಳಿದ್ದು ಅದರಂತೆ ಆಮಂತ್ರಣ ಪತ್ರ ರೆಡಿಯಾಗಿತ್ತು. ಸಂಸದ ಬ್ರಿಜ್ ಭೂಷಣ್ ಸಿಂಗ್ ತಾನು ಬರೋದಿಲ್ಲ ಎಂದೂ ಆರಂಭದಲ್ಲಿ ಹೇಳಿದ್ದರು. ಈಗ ಆಮಂತ್ರಣ ಪತ್ರವನ್ನು ಮರು ಮುದ್ರಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಂಬಳ ಎನ್ನುವುದು ಎಲ್ಲರ ಕಾರ್ಯಕ್ರಮ, ಎಲ್ಲರಿಗೆ ಸೇರಿದ್ದು. ಇದಕ್ಕೆ ಬಿಜೆಪಿ, ಕಾಂಗ್ರೆಸ್ ಅನ್ನುವ ರಾಜಕೀಯ, ಮತ ಭೇದ ಇಲ್ಲದೆ ಎಲ್ಲರೂ ಆಗಮಿಸುತ್ತಾರೆ. ದೊಡ್ಡ ಕಾರ್ಯಕ್ರಮ ಸಂಘಟಿಸುವಾಗ ಸಣ್ಣ ಪುಟ್ಟ ತಪ್ಪುಗಳು ಆಗುತ್ತವೆ. ಅದನ್ನು ಸರಿ ಪಡಿಸಲಾಗುವುದು ಎಂದು ಅಶೋಕ್ ರೈ ಹೇಳಿದ್ದಾರೆ. ದೆಹಲಿಯ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಸಂಸದನಾಗಿರುವ ಬ್ರಿಜ್ ಭೂಷಣ್ ಸಿಂಗ್ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದಾಗ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೀಡಾಗಿದ್ದರು. ಖ್ಯಾತ ನಾಮ ಕುಸ್ತಿ ಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
The Bengalore Kambala Committee president and Congress MLA Ashok Rai Kodimbadi has opted not to extend an invitation to BJP MP Brij Bhushan Sharan Singh for the upcoming Kambala event in coastal Karnataka, following widespread criticism on social media regarding the initial decision to invite him.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm