ಬ್ರೇಕಿಂಗ್ ನ್ಯೂಸ್
21-11-23 11:08 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30ಕ್ಕೆ ನಿವೃತ್ತಿಯಾಗುತ್ತಿರುವ ವಂದಿತಾ ಶರ್ಮ ಅವರ ಜಾಗವನ್ನು ಗೋಯಲ್ ತುಂಬಲಿದ್ದಾರೆ.
2022ರ ಮೇ ತಿಂಗಳಲ್ಲಿ ವಂದಿತಾ ಶರ್ಮಾ ರಾಜ್ಯ ಸರಕಾರದ ಅತ್ಯುನ್ನತ ಅಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಈ ಸ್ಥಾನಕ್ಕೇರಿದ ನಾಲ್ಕನೇ ಮಹಿಳಾ ಅಧಿಕಾರಿ ಇವರಾಗಿದ್ದಾರೆ. 1986ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಗೋಯಲ್ ಸದ್ಯಕ್ಕೆ ಮುಖ್ಯಮಂತ್ರಿಯವರ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿದ್ದಾರೆ.
ಇತರೇ ಹಲವು ಹಿರಿಯ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ಹುದ್ದೆಯ ಆಕಾಂಕ್ಷಿ ಲಿಸ್ಟಲ್ಲಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಯಲ್ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ವಿ. ಮಂಜುಳಾ, ಅಯಜ್ ಸೇಠ್, ಜಾವೇದ್ ಅಖ್ತರ್, ಎಲ್.ಕೆ. ಅತೀಕ್, ಉಮಾ ಮಹದೇವನ್, ಗೌರವ್ ಗುಪ್ತಾ ಆಕಾಂಕ್ಷಿ ಲಿಸ್ಟಲ್ಲಿದ್ದರು.
ಹರ್ಯಾಣ ಮೂಲದ ರಜನೀಶ್ ಗೋಯಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರೈಸಿದ್ದು ಬಳಿಕ ಸಾರ್ವಜನಿಕ ಆಡಳಿತ ವಿಷಯದಲ್ಲಿ ಪಿಎಚ್ ಡಿ ಮಾಡಿದ್ದರು. 37 ವರ್ಷಗಳ ಸೇವಾವಧಿಯಲ್ಲಿ ಅತ್ಯುತ್ತಮ ಅಧಿಕಾರಿಯಾಗಿ ಗೋಯಲ್ ಹೆಸರು ಮಾಡಿದ್ದಾರೆ. ಬಿಬಿಎಂಪಿ ಕಮಿಷನರ್, ಉನ್ನತ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಪತ್ನಿ ಶಾಲಿನಿ ರಜನೀಶ್ ಕೂಡ ರಾಜ್ಯ ಸರಕಾರದಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.
Rajneesh Goel, IAS officer of the 1986 batch, has been appointed as the next Chief Secretary of Karnataka. The State government on Tuesday issued an order appointing Mr. Goel, Additional Chief Secretary, Home Department, as the Chief Secretary. He will take charge from outgoing Chief Secretary Vandita Sharma, who is retiring from service on superannuation, on November 30.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm