ಬ್ರೇಕಿಂಗ್ ನ್ಯೂಸ್
23-11-23 09:38 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕದಿಂದ ಮುನಿಸಿಕೊಂಡಿದ್ದರು. ಆನಂತರ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಸೋಮಣ್ಣ, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿಯ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಯೂ ಇಲ್ಲ, ನಾನೂ ಯಾರನ್ನೂ ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೆ, ಚಾಮರಾಜನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲು ಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೇಳಿಕೊಂಡಿದ್ದರು.
Raising a banner of revolt against BJP, prominent party leader and former minister V. Somanna has announced to disclose his future plan of action after December 6. Somanna is maintaining a distance from the saffron party following his defeat in the Assembly elections earlier this year.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm