ಬ್ರೇಕಿಂಗ್ ನ್ಯೂಸ್
27-11-23 10:08 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬೆಳ್ಳಂ ಬೆಳಗ್ಗೆ ಸಿಎಂ ಗೃಹ ಕಚೇರಿ ಕೃಷ್ಣಾದ ಮುಂದೆ ಸರದಿ ಸಾಲಿನಲ್ಲಿ ನಿಂತ ಜನರ ಸಾಲು. ಕೈಯಲ್ಲಿ ಮನವಿ ಪತ್ರಗಳನ್ನು ಹಿಡಿದುಕೊಂಡು ಪರಿಹಾರದ ನಿರೀಕ್ಷೆಯಲ್ಲಿದ್ದ ಹಿರಿಯರು. ನಡೆಯಲು ಸಾಧ್ಯವಾಗದೆ ಗಾಲಿ ಖುರ್ಚಿಯಲ್ಲಿ ಬಂದು ಸಿಎಂ ಭೇಟಿ ಮಾಡಿ ಸಮಸ್ಯೆ ತೋಡಿಕೊಂಡ ವಿಶೇಷ ಚೇತನರು. ಎಲ್ಲರ ಸಮಸ್ಯೆಗಳನ್ನು ಆಲಿಸಿ ಕೆಲವಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ
ನವೀನ್ ಎಂಬ ಉಪನ್ಯಾಸಕರೊಬ್ಬರು ಕಿಡ್ನಿ ಸಮಸ್ಯೆ ಎದುರಿಸುತ್ತಿರುವ ಐದು ವರ್ಷದ ಮಗುವನ್ನು ಜನತಾ ದರ್ಶನಕ್ಕೆ ಕರೆತಂದು ಕನಕಪುರಕ್ಕೆ ವರ್ಗಾವಣೆ ಮಾಡುವಂತೆ ಸಿಎಂ ಬಳಿ ಮನವಿ ಮಾಡಿದರು. ತಮ್ಮ ಐದು ವರ್ಷದ ಮಗು ಕಿಡ್ನಿ ಸಿಂಡ್ರೋಮ್ ನಿಂದ ಬಳಲುತ್ತಿದೆ. ಆದರೆ ನಮ್ಮನ್ನು ಅರಸೀಕೆರೆ ಶಾಲೆಗೆ ವರ್ಗಾವಣೆ ಮಾಡಲಾಗಿದೆ. ಕನಕಪುರಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದರು. ಸದ್ಯ ಕನಕಪುರದಲ್ಲಿ ಹುದ್ದೆ ಖಾಲಿ ಇದ್ದು, ವೈದ್ಯಕೀಯ ಪ್ರಕರಣಗಳಲ್ಲಿ ತಮ್ಮ ಹುಟ್ಟೂರಿಗೆ ವರ್ಗಾವಣೆ ತೆಗೆದುಕೊಳ್ಳುವ ನಿಯಮ ಇದೆ. ಅದರಂತೆ ಕನಕಪುರಕ್ಕೆ ವರ್ಗಾವಣೆ ಮಾಡಿಕೊಡುವಂತೆ ಕೋರಿದರು. ಬಹಳಷ್ಟು ಸಮಸ್ಯೆ ಇದೆ. ಕನಕಪುರಕ್ಕೆ ವರ್ಗಾಯಿಸಿದರೆ ಮಗುವಿಗೆ ಉತ್ತಮ ಚಿಕಿತ್ಸೆ ಕೊಡಿಸಬಹುದು ಎಂದು ಮನವಿ ಮಾಡಿದರು. ಈ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆ ಎಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿಗಳು, ಬಳಿಕ ಅಹವಾಲು ಸಲ್ಲಿಸಲು ಬಂದಿರುವವರ ಸಂಖ್ಯೆ ಇನ್ನೂ ಸಿಕ್ಕಾಪಟ್ಟೆ ಇದೆ ಎಂದು ತಿಳಿದು, ಅಹವಾಲು ಸ್ವೀಕರಿಸುವ ಟೇಬಲ್ಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಮಾಡಿದರು.
3,812 ಅರ್ಜಿಗಳ ಸ್ವೀಕಾರ:
ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್ಎಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್ಎಸ್ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಹಾಸನ ಜಿಲ್ಲೆಯ ಮಹೇಂದ್ರ ಅವರ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಸ್ಥಳೀಯ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಮಹೇಂದ್ರ ಎಂಬುವವರು ದೂರಿದರು. ಸಿಎಂ ಅವರನ್ನು ಪದೇ ಪದೇ ಅಂಕಲ್ ಎಂದು ಕರೆದ ಈ ವ್ಯಕ್ತಿ, ಅವರ ಅಂಧ ಪತ್ನಿಗೆ ತೊಂದರೆ ಕೊಡುವ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಸುಮಾರು ಐದು ನಿಮಿಷಗಳ ಕಾಲ ಅವರ ಸಮಸ್ಯೆ ಆಲಿಸಿದ ಸಿಎಂ ಪರಿಹಾರದ ಭರವಸೆ ನೀಡಿದರು.
Karnataka Chief Minister Siddaramaiah is hosting a day-long Janata Darshan on Monday, November 27, on the premises of the Chief Minister’s home office Krishna in Bengaluru. Thousands of people from across the state have gathered to express their grievances directly to the CM.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm