ಬ್ರೇಕಿಂಗ್ ನ್ಯೂಸ್
29-11-23 08:11 pm Bangalore Correspondent ಕರ್ನಾಟಕ
Photo credits : ANI news
ಬೆಂಗಳೂರು, ನ.29: ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ನ್ಯುಮೋನಿಯಾ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಟಿಸಿದೆ. ಇದೇ ರೀತಿ ಕೇಂದ್ರ ಸರ್ಕಾರವೂ ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಇದುವರೆಗೆ ಚೈನಾ ನ್ಯುಮೋನಿಯಾಗೆ ಸಂಬಂಧಿಸಿದ ವೈರಸ್ ಪತ್ತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಆಸ್ಪತ್ರೆಗಳಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಸಿ ಎಚ್ಚರಿಕೆ ಮೂಡಿಸಬೇಕು ಎಂಬುದೂ ಸೇರಿದಂತೆ ಹಲವು ಬಗೆಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಕೆ ಮಾಡಲು ಆದ್ಯತೆ ನೀಡುವಂತೆ ಹೇಳಲಾಗಿದೆ ಎಂದರು.

ಜ್ವರ ಬಂದ ತಕ್ಷಣ ಜನ ಆಸ್ಪತ್ರೆಗಳಿಗೆ ತೆರಳಿ ವಿವಿಧ ಪರೀಕ್ಷೆಗಳಿಗೆ ಒಳಪಡಬೇಕು ಎಂದ ಅವರು, ಈ ಶೀತಜ್ವರ ಸಾಮಾನ್ಯವಾಗಿ ಐದು ದಿನಗಳವರೆಗೆ ಇರುತ್ತದೆ. ಹೀಗಾಗಿ ಯಾವ ಕಾರಣಕ್ಕೂ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು. ವಯೋವೃದ್ಧರು ಮತ್ತು ಮಕ್ಕಳು ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ವಿವಿಧ ರೋಗಗಳಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರಗಳನ್ನು ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಗಾಗ ಕೈ ತೊಳೆಯುತ್ತಿರಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಜನರಿಗೆ ಮನವಿ ಮಾಡಿಕೊಂಡರು. ಸೋಂಕಿಗೆ ಸಂಬಂಧಿಸಿದಂತೆ ನಿತ್ಯ ಅಧಿಕಾರಿಗಳು ನಿಗಾ ವಹಿಸುತ್ತಾರೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದ ಸಚಿವರು, ಇಷ್ಟೆಲ್ಲದರ ನಡುವೆಯೂ ಜನ ಆತಂಕಪಡುವ ಅಗತ್ಯವೇನಿಲ್ಲ. ಆದರೆ, ಸೋಂಕಿನ ಕುರಿತು ಎಚ್ಚರಿಕೆಯಿರಲಿ ಎಂದು ಸಲಹೆ ನೀಡಿದರು.
The advisory by the Karnataka government mentions the do's and don'ts to avoid any kind of infection. These include covering the mouth and nose while coughing or sneezing, frequent hand washing, avoiding unnecessary touching of the face, and using face masks in crowded places.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm