ಬ್ರೇಕಿಂಗ್ ನ್ಯೂಸ್
30-11-23 04:05 pm Bangalore Correspondent ಕರ್ನಾಟಕ
ಬೆಂಗಳೂರು, ನ.30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 108 ಆಂಬ್ಯುಲೆನ್ಸ್ ಸೇವೆಗಳ ನೂತನ 262 ಗಳನ್ನು ಗುರುವಾರ ವಿಧಾನಸೌಧ ಮುಂದೆ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಅಂಬ್ಯುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದರು. 82.02 ಕೋಟಿ ರೂಪಾಯಿ ವೆಚ್ಚದಲ್ಲಿ 262 ಆಂಬ್ಯುಲೆನ್ಸ್ ಗಳು ಖರೀದಿಸಲಾಗಿದೆ. 262 ಪೈಕಿ 157 ಅಂಬ್ಯುಲೆನ್ಸ್ಗಳಲ್ಲಿ ಬಿಎಲ್ ಎಸ್ ಹಾಗೂ 105 ಅಂಬ್ಯುಲೆನ್ಸ್ ಅಡ್ವಾನ್ಸ್ ಲೈಫ್ ಸಪೋರ್ಟ್ ಸೌಲಭ್ಯವಿದ್ದು, ಹೃದಯ ಮತ್ತು ಉಸಿರಾಟದ ತುರ್ತು ಪರಿಸ್ಥಿಗಳಲ್ಲಿ ಇವು ಸಹಕರಿಯಾಗಿವೆ.

ಆಂಬ್ಯುಲೆನ್ಸ್ಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎಂಬ ಕಾರಣಕ್ಕೆ ತುರ್ತು 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಅಂಬ್ಯುಲೆನ್ಸ್ ಗಳ ಅಗತ್ಯವಿದೆ. ಪ್ರತಿ ತಾಲ್ಲೂಕಿನಲ್ಲಿ 4 ಅಂಬ್ಯುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತಿ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.
ಪ್ರತೀ ಜಿಲ್ಲೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನೊಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕಾಲೇಜುಗಳನ್ನು ಸ್ಥಾಪಿಸಿ ಹೆಚ್ಚು ವೈದ್ಯರುಗಳನ್ನು ತಯಾರು ಮಾಡುತ್ತಿದ್ದು, ರಾಜ್ಯದಲ್ಲಿ 70 ಮೆಡಿಕಲ್ ಕಾಲೇಜುಗಳಿವೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಇದೆ ಎಂದು ಮಾಹಿತಿ ನೀಡಿದರು.

ನಮ್ಮ ದೇಶದ ಇತರೆ ರಾಜ್ಯಗಳು ನಮ್ಮನ್ನು ಅನುಸರಿಸುತ್ತಿವೆ. 108 ಆ್ಯಂಬುಲೆನ್ಸ್ಗೆ ಡಿಜಿಟಲೀಕರಣ ಅಳವಡಿಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳ ಜೊತೆ ಆ್ಯಂಬುಲೆನ್ಸ್ ಚಾಲಕರು ಹೊಂದಾಣಿಕೆ ಮಾಡಿಕೊಂಡು ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಸೇರಿಸುತ್ತಿದ್ದಾರೆ. ಆರೋಗ್ಯ ಇಲಾಖೆ, ಸಚಿವರು ಇದಕ್ಕೆ ಬ್ರೇಕ್ ಹಾಕಬೇಕು ಎಂದು ಖಡಕ್ ಆಗಿ ಹೇಳಿದರು.
ಖಾಸಗಿ ಆಸ್ಪತ್ರೆಗಿಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯ ಚೆನ್ನಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ ಲಕ್ಷ ಬಿಲ್ ಮಾಡಿದ ಬಳಿ ನಮ್ಮ ಬಳಿ ಬರುತ್ತಾರೆ, ನಾನು ತಿಂಗಳಿಗೆ 20 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಮೊದಲು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸಬೇಕು. ಯಾವ ಖಾಸಗಿ ಆಸ್ಪತ್ರೆಗಿಂತ ನಮ್ಮ ಸರ್ಕಾರಿ ಆಸ್ಪತ್ರೆ ಕಡಿಮೆ ಇಲ್ಲ ಎಂದರು.
Karnataka Chief Minister Siddaramaiah will launch new ambulances in the revamped 108 ambulance service on Thursday, as announced by the Health Department in its review meeting on Wednesday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm