ಬ್ರೇಕಿಂಗ್ ನ್ಯೂಸ್
01-12-23 05:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ರಾಜಧಾನಿಯ ವಿವಿಧ ಶಾಲೆಗಳಿಗೆ ಇಂದು ಬಾಂಬ್ ಇಟ್ಟಿರುವುದಾಗಿ ಆಗಂತುಕರು ಬೆದರಿಕೆ ಹಾಕಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪ್ರತಿಕ್ರಿಯಿಸಿ, ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಹಾಗೂ ಸ್ಕ್ವೈಡ್ಗಳನ್ನು ಕಳುಹಿಸಿ ತಪಾಸಣೆ ನಡೆಸಲಾಗುತ್ತದೆ. ಕಟ್ಟೆಚ್ಚರ ವಹಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕಳೆದ ವರ್ಷ ಕೂಡಾ ಬೆದರಿಕೆ ಬಂದಿತ್ತು. ಆಗ ನಮ್ಮ ಸಿಬ್ಬಂದಿ ಎಚ್ಚೆತ್ತುಕೊಂಡು ಆರೋಪಿಗಳನ್ನು ಪತ್ತೆ ಮಾಡಿದ್ದರು. ಅವುಗಳೆಲ್ಲವೂ ಹುಸಿ ಬೆದರಿಕೆ ಕರೆಗಳಾಗಿದ್ದವು. ಈ ಪ್ರಕರಣವನ್ನೂ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
![]()
ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ:
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ನಗರ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮತ್ತು ಮಕ್ಕಳು ಆತಂಕಪಡುವುದು ಬೇಡ ಎಂದು ತಿಳಿಸಿದ್ದಾರೆ.

ಡಿಸಿಎಂ ಶಿವಕುಮಾರ್ಪ್ರತಿಕ್ರಿಯಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಸದಾಶಿವ ನಗರದ ನೀವ್ ಸ್ಕೂಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ:
ಬಸವೇಶ್ವರನಗರದ ಎನ್ಎಎಫ್ಎಲ್ ಶಾಲೆಗೆ ಭೇಟಿ ನೀಡಿದ ಬಳಿಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಪೊಲೀಸ್ ಕಮೀಷನರ್ ಜೊತೆ ಮಾತನಾಡಿದ್ದೇನೆ. ಟೈಪ್ ಮಾಡಿದ್ದನ್ನು ನೋಡಿದರೆ ಹೈ ಲೆವೆಲ್ ಟೆರರಿಸ್ಟ್ ರೀತಿ ಕಾಣುತ್ತಿದೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದ್ದು, ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗೆ ಬಾಂಬ್ ಮೇಲ್ ಬಂದಿದೆ. ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ನಾನು ಕೂಡ ಭೇಟಿ ಮಾಡಿದ್ದೇನೆ ಎಂದರು.
BJP R Ashok says mail shows high level terrorist suspected on bomb mail to schools in Bangalore. Home Minister has ordered for high level probe in this case.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm