ಬ್ರೇಕಿಂಗ್ ನ್ಯೂಸ್
01-12-23 06:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.1: ಹೆಲ್ಮೆಟ್ ಹಾಕದ ಕಾರಣಕ್ಕೆ ವಕೀಲನ ಮೇಲೆ ಪೋಲಿಸರು ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದೆ. ಇದರ ಬೆನ್ನಲ್ಲೇ ವಕೀಲರು ಭಾರೀ ಪ್ರತಿಭಟನೆ ನಡೆಸಿದ್ದು, ಘಟನೆ ಹಿನ್ನೆಲೆಯಲ್ಲಿ ಪಿಎಸ್ ಐ 6 ಮಂದಿ ಪೊಲೀಸರನ್ನು ಎಸ್ಪಿ ಅಮಾನತು ಮಾಡಿದ್ದಾರೆ.
ವಕೀಲ ಪ್ರೀತಂ ಎಂಬವರು ಗುರುವಾರ ರಾತ್ರಿ ಹೆಲ್ಮೆಟ್ ಇಲ್ಲದೆ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಪೊಲೀಸರು ಬೈಕ್ನಿಂದ ಕೀ ಕಸಿದುಕೊಂಡಿದ್ದರು. ‘ಹೆಲ್ಮೆಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು’ ಎಂದು ಪ್ರೀತಂ ಪ್ರಶ್ನಿಸಿದ್ದಾರೆ. ಅಲ್ಲದೇ ಅದನ್ನು ವಿಡಿಯೋ ಮಾಡಿದ್ದಾರೆ.



ಇದರಿಂದ ಕೆರಳಿದ ಪೊಲೀಸರು ಪ್ರೀತಂ ಅವರನ್ನು ಠಾಣೆಯ ಒಳಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಕಂಪ್ಯೂಟರ್ ಕೊಠಡಿಯಲ್ಲಿ ಕೂಡಿ ಹಾಕಿ ದೊಣ್ಣೆ, ಲಾಠಿ, ಪೈಪ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರೀತಂ ತಿಳಿಸಿದ್ದಾರೆ. ಅಷ್ಟರಲ್ಲಿ ವಿಷಯ ತಿಳಿದ ಹಲವು ವಕೀಲರು ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪ್ರೀತಂ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಿನ್ನೆ ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿದ ವಕೀಲರು, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸ್ ಹಿರಿಯ ಅಧಿಕಾರಿಗಳು ವಕೀಲರನ್ನು ಸಮಾಧಾನಪಡಿಸಲು ಯತ್ನಿಸಿದರು. ಠಾಣೆಯ ಸಬ್ ಇನ್ಸ್ಪೆಕ್ಟರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದಲ್ಲಿ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
Chikmagaluru lawyer beaten up over helmet issue, 6 including Police Inspector suspended.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm