ಬ್ರೇಕಿಂಗ್ ನ್ಯೂಸ್
04-12-23 08:56 pm HK News Desk ಕರ್ನಾಟಕ
ಬೆಳಗಾವಿ, ಡಿ.4: ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
40.50 ಕೋಟಿ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ಗುಂಡೂರಾವ್, ಪ್ರಾಯೋಗಿಕವಾಗಿ ಮೆನ್ ಸ್ಟ್ರುವಲ್ ಮುಟ್ಟಿನ ಕಪ್ ಗಳನ್ನ ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್ ಗಳನ್ನ ವಿತರಿಸಲಾಗಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that the swachhta scheme, which was stalled for four years, will be revived and napkins will be distributed to school girls from January.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm