ಬ್ರೇಕಿಂಗ್ ನ್ಯೂಸ್
05-12-23 07:41 pm HK News Desk ಕರ್ನಾಟಕ
ಬೆಳಗಾವಿ, ಡಿ.5: ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಕಡ್ಡಾಯ ಗ್ರಾಮೀಣ ಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ.
ವಿಧೇಯಕದಲ್ಲಿ 'ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ' ಎಂಬ ಪದಗಳ ಮೊದಲಿಗೆ 'ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ' ಎಂಬ ಪದಗಳನ್ನ ಸೇರಿಸುವ ಮೂಲಕ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಸೇವೆಯನ್ನ ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.
ಈ ಹಿಂದೆ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರು, ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿ ಸರ್ಟಿಫಿಕೇಟ್ ಪಡೆಯಬೇಕು ಎಂಬ ನೀತಿಯನ್ನ ಸರ್ಕಾರ ಅನುಸರಿಸಿತ್ತು. ಆದರೆ ಇತ್ತೀಚೆಗೆ ವೈದ್ಯಕೀಯ ಸ್ನಾತಕೋತ್ತರ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತಿರ್ಣರಾಗಿ ಹೊರಬರುತ್ತಿರುವುದರಿಂದ, ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಒಂದು ವರ್ಷದ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಕಡ್ಡಾಯ ಸೇವೆಯಡಿ ಕಾರ್ಯ ನಿರ್ವಹಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈಪಂಡನ್ನು ರಾಜ್ಯ ಸರ್ಕಾರವೇ ನಿರ್ಧರಿಸುವ ಅಧಿಕಾರ ಹೊಂದಿದೆ. ಅಲ್ಲದೇ ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ 3,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ, ಖಾಲಿ ಹುದ್ದೆಗಳ ಸಂಖ್ಯೆ 1,900 ಇದ್ದು, ತಿದ್ದುಪಡಿ ವಿಧೇಯಕದ ಮೂಲಕ ಕಡ್ಡಾಯ ಸೇವೆ ಖಾಲಿ ಹುದ್ದೆಗಳಿಗೆ ಸೀಮಿತಗೊಳ್ಳಲಿದೆ.
The state government has decided to exempt candidates who have completed medical courses from compulsory rural service. Health Minister Dinesh Gundu Rao has introduced an amendment bill in the Karnataka Legislative Assembly to amend the Karnataka Medical Compulsory Rural Services Act.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm