ಬ್ರೇಕಿಂಗ್ ನ್ಯೂಸ್
07-12-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್ ಐದಾರು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್ನನ್ನು ಯುವತಿ ಅವಾಯ್ಡ್ ಮಾಡಲು ಶುರು ಮಾಡಿದ್ದಳು.
ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್, ಫೋನ್ ಕಾಲ್ಗೂ ರೆಸ್ಪಾನ್ಸ್ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.
ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
Bangalore youth sets himself fire after lover girl ends relationship. A young man committed suicide by setting himself on fire in Bengaluru after the woman he loved decided to marry someone else, police said. The deceased man Rakesh was a resident of Kottigepalya in Kengeri locality.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm