ಬ್ರೇಕಿಂಗ್ ನ್ಯೂಸ್
08-12-23 11:28 am HK News Desk ಕರ್ನಾಟಕ
ಚಿತ್ರದುರ್ಗ, ಡಿ 08: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Bride rejects bridegroom on the day of wedding on stage at Chitradurga, video goes viral.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm