ಬ್ರೇಕಿಂಗ್ ನ್ಯೂಸ್
13-12-23 11:09 am HK News Desk ಕರ್ನಾಟಕ
ಬೆಳಗಾವಿ, ಡಿ 13: ಬಳ್ಳಾರಿಯ ಅಭಿವೃದ್ಧಿ ಮತ್ತು ರೈತರನ್ನು ಬೆದರಿಸಿ ಜಮೀನು ಸ್ವಾಧೀನ ಪಡಿಸಿಕೊಂಡ ವಿಷಯಕ್ಕೆ ಸಂಬಂಧಿಸಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸದಸ್ಯ ಗಾಲಿ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ನ ನಾರಾ ಭರತ್ ರೆಡ್ಡಿ ಪರಸ್ಪರ ಬೈದಾಡಿಕೊಂಡು, ಒಬ್ಬರ ಮೇಲೊಬ್ಬರು ಮುಗಿಬಿದ್ದ ಪ್ರಸಂಗ ನಡೆಯಿತು.
ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಜನಾರ್ದನ ರೆಡ್ಡಿ, 13 ವರ್ಷದ ಹಿಂದೆ ತಾನು ಮಂತ್ರಿಯಾಗಿದ್ದಾಗ ಹತ್ತಾರು ಯೋಜನೆ ರೂಪಿಸಿದ್ದೆ. ನಂತರ ಬಂದವರು ಅದನ್ನು ಮುಂದುವರಿಸಲಿಲ್ಲ ಎಂದು ಹೇಳಿದ್ದರು.

ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಭರತ್ ರೆಡ್ಡಿ, ಬ್ರಹ್ಮಿಣಿ ಸ್ಟೀಲ್ ಆರಂಭಿಸುವುದಾಗಿ 10–15 ಸಾವಿರ ಎಕರೆ ಭೂಮಿಯನ್ನು ಸರ್ಕಾರದಿಂದ ಪಡೆದಿದ್ದರು. ರೈತರು ಕೊಡಲು ಒಪ್ಪದಿದ್ದಾಗ ಗೂಂಡಾಗಿರಿ ನಡೆಸಿ ವಶಪಡಿಸಿಕೊಂಡಿದ್ದರು. ಬಳಿಕ, ಅದನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಸಿಕೊಂಡಿದ್ದಲ್ಲದೇ ಬಳಿಕ ಬೇರೆ ಕಂಪನಿಗೆ ಮಾರಿದ್ದರು. ತಮ್ಮ ಜಮೀನಿಗೆ ಹೆಚ್ಚಿನ ಬೆಲೆ ಬರಲಿದೆ ಎಂಬ ಕಾರಣಕ್ಕೆ ನಿರ್ದಿಷ್ಟ ಪ್ರದೇಶದಲ್ಲಿಯೇ ವಿಮಾನ ನಿಲ್ದಾಣಕ್ಕೆ ಜಾಗ ಗೊತ್ತು ಮಾಡಿಸಿದ್ದರು. ಜಾಗ ಬಿಟ್ಟುಕೊಡದ ರೈತರ ಮೇಲೆ ಗೋಲಿಬಾರ್ ಮಾಡಿಸಿದ್ದರು. ಈಗ ಬಂದು ಅಭಿವೃದ್ಧಿಯ ಮಾತನಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿಯವರ ಹೆಸರು ಹೇಳದೇ ಕುಟುಕಿದರು.
ಅದಕ್ಕೆ ಪ್ರತಿಕ್ರಿಯಿಸಿದ, ಜನಾರ್ದನ ರೆಡ್ಡಿ, ‘ಅವನಿಗೆ ತಲೆ ಇಲ್ಲ, ಏನೇನೋ ಮಾತನಾಡುತ್ತಾನೆ’ ಎಂದು ರೇಗಿದರು. ಈ ಮಾತಿಗೆ ಸಿಟ್ಟಾದ ಭರತ್ ರೆಡ್ಡಿ, ‘ನಿನಗೆ ತಲೆ ಇಲ್ಲ. ಕರ್ನಾಟಕದ ಗಡಿಭಾಗವನ್ನು ಆಂಧ್ರಕ್ಕೆ ಸೇರಿಸಿದ್ದು ನೀನೇ. ಕೂತ್ಕೊಳಯ್ಯ ತೆಪ್ಪಗೆ. ಕರ್ನಾಟಕದ ಜನರಿಗೆ ಏನೇನು ಮೋಸ ಮಾಡಿದ್ದೀಯ ಅದರ ದಾಖಲೆ ಬಿಚ್ಚಿಡುತ್ತೇನೆ. ತರ್ತೀನಿ ಬಾ’ ಎಂದು ಕೂಗಾಡಿದರು.
‘ಇವನ ಅಪ್ಪ ಇಪ್ಪತ್ತು ವರ್ಷ ಮನೆಯಿಂದ ಹೊರಗೇ ಬಾರದೇ ಕುಳಿತಿದ್ದ. ಅವನು ಕೂತಿದ್ದ ಎಂದು ಇವ ಈಗ ಬಂದಿದ್ದಾನೆ’ ಎಂದು ಜನಾರ್ದನ ರೆಡ್ಡಿ ಹೇಳಿದರು. ಸಚಿವ ಬಿ. ನಾಗೇಂದ್ರ ಸೇರಿದಂತೆ ಕಾಂಗ್ರೆಸ್ ಸದಸ್ಯರು ಭರತ್ ರೆಡ್ಡಿ ಬೆಂಬಲಕ್ಕೆ ನಿಂತರು. ತೀವ್ರ ವಾಕ್ಸಮರ ನಡೆಯಿತು.
ಮಧ್ಯ ಪ್ರವೇಶಿಸಿದ ಸಚಿವ ನಾಗೇಂದ್ರ, ‘ಸದನದ ಸದಸ್ಯರೊಬ್ಬರು ನಮಗೆ ನೋವುಂಟು ಮಾಡಿದ್ದಾರೆ. ಗಡಿಭಾಗದಲ್ಲಿ ಏನು ನಡೆದಿದೆ. ಜಮೀನು ಕಳೆದುಕೊಂಡ ರೈತರು ತಮ್ಮ ಕಷ್ಟ ತೋಡಿಕೊಂಡಿದ್ದಾರೆ. ಗಡಿಯಲ್ಲಿ ತಪ್ಪು ಮಾಡಿದವರನ್ನು ಶಿಕ್ಷಿಸದೇ ಬಿಡುವುದಿಲ್ಲ’ ಎಂದು ಹೇಳಿ ಚರ್ಚೆಯನ್ನು ಕೊನೆಗಾಣಿಸಿದರು.
ಅದಕ್ಕೂ ಮೊದಲು ಜನಾರ್ದನ ರೆಡ್ಡಿ ಮಾತನಾಡುವಾಗ, ತಾವು ಸಚಿವ ಸ್ಥಾನ ಕಳೆದುಕೊಂಡ ಬಳಿಕ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದರು. ಇದನ್ನು ಕಾಂಗ್ರೆಸ್ನ ಈ. ತುಕಾರಾಂ ಆಕ್ಷೇಪಿಸಿದರು. ಇಬ್ಬರ ಮಧ್ಯೆ ವಾಕ್ಸಮರವೂ ನಡೆಯಿತು.
Mla Bharath Reddy vs Janardhana Reddy fight in assembly, Bharath talks in simgkuar, video goes viral.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm