ಬ್ರೇಕಿಂಗ್ ನ್ಯೂಸ್
14-12-23 07:45 pm HK News Desk ಕರ್ನಾಟಕ
ಬೆಳಗಾವಿ, ಡಿ 14: ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ, ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಮದ್ಯಪಾನ ಪ್ರಿಯರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಭಟನಾಕಾರರ ಬೇಡಿಕೆಗಳನ್ನ ಆಲಿಸಿ, ಮನವಿ ಸ್ವೀಕರಿಸಿದ್ದಾರೆ. ಈ ವೇಳೆ ಬೇಡಿಕೆಗಳನ್ನ ಕೇಳಿ ಫುಲ್ ಸುಸ್ತಾಗಿದ್ದಾರೆ.

ಮದ್ಯಪಾನ ಪ್ರಿಯರ ಬೇಡಿಕೆಗಳು ಏನೇನು?
ಪ್ರತಿವರ್ಷ ಡಿಸೆಂಬರ್ 31ರ ದಿನವನ್ನು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು. ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್ನಲ್ಲಿ 50% ರಿಯಾಯಿತಿ ನೀಡಬೇಕು. ʻಕುಡುಕʼ ಎಂಬ ಪದಬಳಕೆ ನಿಷೇಧ ಮಾಡಬೇಕು, ಮದ್ಯಪಾನ ಪ್ರಿಯರ ಅಭಿವೃದ್ಧಿ ನಿಗಮ ಆರಂಭಿಸಿ 10% ಅನುದಾನ ನೀಡಬೇಕು. ಪ್ರತಿ ಬಾಟಲಿಗೆ ವಿಮೆ ನೀಡಬೇಕು, ಪ್ರತಿ ಬಾರ್ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು. ಬಾರ್ ಪಕ್ಕದಲ್ಲಿ ಕುಡುಕರ ವಿಶ್ರಾಂತಿಗಾಗಿ ಭವನ ನಿರ್ಮಾಣ ಮಾಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.
ಮದ್ಯಪಾನ ಪ್ರಿಯರ ಆರೋಗ್ಯ ಹಾಳಾಗುತ್ತಿದೆ. ಲಿವರ್ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ಬಿಲ್ ಪಾವತಿಸಲಾಗದೇ ಮರಣ ಹೊಂದುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ಆಗುವ ಖರ್ಚನ್ನು ಸರ್ಕಾರವೇ ಭರಿಸಬೇಕು. ಮದ್ಯಪಾನ ಪ್ರಿಯರಿಂದ ವಾರ್ಷಿಕವಾಗಿ 36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿದೆ. ಕುಡುಕರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿ ಆದಾಯದ 10% ಹಣವನ್ನ ನಿಧಿಗೆ ಮೀಸಲಿಡಬೇಕು. ಮದ್ಯಪಾನ ಪ್ರಿಯರು ಮೃತಪಟ್ಟ ಸಂದರ್ಭದಲ್ಲಿ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Drunkards protest for insurance and ambulance at every bar to minister Santosh Lad in Belagavi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm