ಬ್ರೇಕಿಂಗ್ ನ್ಯೂಸ್
14-12-23 07:45 pm HK News Desk ಕರ್ನಾಟಕ
ಬೆಳಗಾವಿ, ಡಿ 14: ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ, ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಮದ್ಯಪಾನ ಪ್ರಿಯರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಭಟನಾಕಾರರ ಬೇಡಿಕೆಗಳನ್ನ ಆಲಿಸಿ, ಮನವಿ ಸ್ವೀಕರಿಸಿದ್ದಾರೆ. ಈ ವೇಳೆ ಬೇಡಿಕೆಗಳನ್ನ ಕೇಳಿ ಫುಲ್ ಸುಸ್ತಾಗಿದ್ದಾರೆ.

ಮದ್ಯಪಾನ ಪ್ರಿಯರ ಬೇಡಿಕೆಗಳು ಏನೇನು?
ಪ್ರತಿವರ್ಷ ಡಿಸೆಂಬರ್ 31ರ ದಿನವನ್ನು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು. ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್ನಲ್ಲಿ 50% ರಿಯಾಯಿತಿ ನೀಡಬೇಕು. ʻಕುಡುಕʼ ಎಂಬ ಪದಬಳಕೆ ನಿಷೇಧ ಮಾಡಬೇಕು, ಮದ್ಯಪಾನ ಪ್ರಿಯರ ಅಭಿವೃದ್ಧಿ ನಿಗಮ ಆರಂಭಿಸಿ 10% ಅನುದಾನ ನೀಡಬೇಕು. ಪ್ರತಿ ಬಾಟಲಿಗೆ ವಿಮೆ ನೀಡಬೇಕು, ಪ್ರತಿ ಬಾರ್ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು. ಬಾರ್ ಪಕ್ಕದಲ್ಲಿ ಕುಡುಕರ ವಿಶ್ರಾಂತಿಗಾಗಿ ಭವನ ನಿರ್ಮಾಣ ಮಾಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.
ಮದ್ಯಪಾನ ಪ್ರಿಯರ ಆರೋಗ್ಯ ಹಾಳಾಗುತ್ತಿದೆ. ಲಿವರ್ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ಬಿಲ್ ಪಾವತಿಸಲಾಗದೇ ಮರಣ ಹೊಂದುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ಆಗುವ ಖರ್ಚನ್ನು ಸರ್ಕಾರವೇ ಭರಿಸಬೇಕು. ಮದ್ಯಪಾನ ಪ್ರಿಯರಿಂದ ವಾರ್ಷಿಕವಾಗಿ 36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿದೆ. ಕುಡುಕರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿ ಆದಾಯದ 10% ಹಣವನ್ನ ನಿಧಿಗೆ ಮೀಸಲಿಡಬೇಕು. ಮದ್ಯಪಾನ ಪ್ರಿಯರು ಮೃತಪಟ್ಟ ಸಂದರ್ಭದಲ್ಲಿ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Drunkards protest for insurance and ambulance at every bar to minister Santosh Lad in Belagavi.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm