ಬ್ರೇಕಿಂಗ್ ನ್ಯೂಸ್
15-12-23 03:18 pm HK News Desk ಕರ್ನಾಟಕ
ಮೈಸೂರು, ಡಿ 15: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.

ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ.
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ.
A controversial flex has been erected in Mysuru against MP Pratap Simha for issuing passes to the attackers in connection with the smoke bomb case in Parliament.
05-03-26 08:41 pm
HK News Staffer
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm