ಬ್ರೇಕಿಂಗ್ ನ್ಯೂಸ್
15-12-23 03:18 pm HK News Desk ಕರ್ನಾಟಕ
ಮೈಸೂರು, ಡಿ 15: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.

ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ.
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ.
A controversial flex has been erected in Mysuru against MP Pratap Simha for issuing passes to the attackers in connection with the smoke bomb case in Parliament.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm