ಬ್ರೇಕಿಂಗ್ ನ್ಯೂಸ್
17-12-23 06:55 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 17: ವಂಟಮೂರಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಏನಾಗಿದೆ ಎಂಬುವುದು ಜನರಿಗೆ ಗೊತ್ತು ವಾಗ್ದಾಳಿ ನಡೆಸಿದ್ದಾರೆ.
ಯಾರ ಕಾಲದಲ್ಲಿ ಎಷ್ಟು ಕ್ರೈಂ ಕೇಸ್ ಆಗಿವೆಯೋ ವರದಿ ನೋಡಲಿ:
ಸಿದ್ದರಾಮಯ್ಯ ಬಿಜೆಪಿ ನಾಯಕರ ಆರೋಪಗಳಿಗೆ ಗದಗದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ವಂಟಮೂರಿ ಪ್ರಕರಣ ಗೊತ್ತಾದ ತಕ್ಷಣವೇ ಗೃಹ ಸಚಿವರು ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕ 9 ವರ್ಷದ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆ.ಪಿ. ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳುತ್ತಾರೆ? ಇಂತಹ ಎಂಎಲ್ಎ ಇಟ್ಟುಕೊಂಡವರು, ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವವರು ಬಿಜೆಪಿಯವವರು. ಅವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ
ನ್ಯಾಷನಲ್ ಕ್ರೈಂ ಬ್ಯೂರೋ ವರದಿ ನೋಡಲಿ, ಯಾರ ಕಾಲದಲ್ಲಿ ಎಷ್ಟು ಪ್ರಕರಣ ಆಗಿವೆ ಅಂತ ಗೊತ್ತಾಗುತ್ತೆ. ಯಾರ ಮೇಲೆ ದೌರ್ಜನ್ಯ ಆದರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ವಂಟಮೂರಿ ಘಟನೆ ಅನಾಗರಿಕ ಘಟನೆ, ಇದು ನಾಗರಿಕ ಸಮಾಜದಲ್ಲಿ ನಡೆಯಬಾರದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅವಧಿಯಲ್ಲಿ ಕೊಲೆ, ರೇಪ್ ಕೇಸ್ ಹೆಚ್ಚು:
ಪ್ರಲ್ಹಾದ್ ಜೋಶಿ ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಸಿದ್ದರಾಮಯ್ಯ ಅವರು ಬೆಳಗಾವಿ ಘಟನೆಯನ್ನು, ಇತರೆ ರಾಜ್ಯದ ಘಟನೆಗಳಿಗೆ ಹೋಲಿಸಬಾರದು. ಮಣಿಪುರಿ ಘಟನೆಗೂ, ಬೆಳಗಾವಿ ವಿಚಾರಕ್ಕೆ ಅಜಗಜಾಂತರ ವ್ಯತ್ಯಾಸ ಇದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಅದಕ್ಕೂ ಮೊದಲು ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಣಿಪುರ ಘಟನೆ ಆದ ಮೇಲೂ ಕೇಂದ್ರ ಸರ್ಕಾರ ಕೈ ಕಟ್ಟಿ ಕುಳಿತಿಲ್ಲ. ಈ ಹಿಂದೆ ಇಂತಹ ಘಟನೆ ಆದಾಗ ಒಬ್ಬೇ ಒಬ್ಬ ಗೃಹಸಚಿವ ಮಣಿಪುರಕ್ಕೆ ಹೋಗಿರಲಿಲ್ಲ. ಅಮಿತ್ ಷಾ ಮೂರು ದಿನ ಹೋಗಿ ಅಲ್ಲೆ ಇದ್ದರು. ಕೇಂದ್ರದ ಗೃಹ ರಾಜ್ಯಮಂತ್ರಿ 24 ದಿನ ಅಲ್ಲೆ ಇದ್ದರು. ಇಲ್ಲಿ ನಡೆದ ಘಟನೆ ಸಾಮಾನ್ಯ ರಾಜ್ಯಗಳಲ್ಲಿ ಆಗಿರುವ ಘಟನೆಗಳು. ರಾಜಸ್ಥಾನದಲ್ಲಿ ಹೆಚ್ಚು ಕೊಲೆ, ರೇಪ್ ಕೇಸ್ ಕಾಂಗ್ರೆಸ್ ಅವಧಿಯಲ್ಲಿ ಆಗಿವೆ. ಕೊಲೆ, ಅತ್ಯಾಚಾರ ನಂಬರ್ ಒನ್ ರಾಜಸ್ಥಾನ ಇತ್ತು. ದೇಶದ ಒಟ್ಟು ಕ್ರೈಂಗಳಲ್ಲಿ ಶೇ.16 ಕ್ರೈಂ ರಾಜಸ್ಥಾನದಲ್ಲಿ ಆಗಿದೆ. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲಿ ಇಂತಹ ಘಟನೆಗಳು ಜಾಸ್ತಿ ಆಗಿದೆ ಎಂದು ಟೀಕಿಸಿದ್ದಾರೆ.
A war of words continues between bjp and Congress leaders over the incident in which a Vantamuri woman was stripped and assaulted. BJP leaders alleged that the number of crime cases in the state has increased under the Congress government.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm