ಬ್ರೇಕಿಂಗ್ ನ್ಯೂಸ್
18-12-23 03:12 pm HK News Desk ಕರ್ನಾಟಕ
ಕುಶಾಲನಗರ, ಡಿ.18: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೊಡಗಿನ ಕುಶಾಲ ನಗರದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
ಕೊರೊನಾ ರೂಪಾಂತರಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೆ, ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡ ನಿನ್ನೆಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ.
ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that masks have been made mandatory for those above 60 years of age in the wake of the detection of covid-19 variant in the state.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm