ಬ್ರೇಕಿಂಗ್ ನ್ಯೂಸ್
18-12-23 06:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 18: ನಗರದ ವಾಹನ ಸವಾರರೊಬ್ಬರು ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಿದ ಹಣದಲ್ಲಿ ಪ್ರಾಯಶಃ ಮೂರು ದ್ವಿಚಕ್ರ ವಾಹನಗಳನ್ನ ಕೊಂಡುಕೊಳ್ಳಬಹುದಾಗಿತ್ತು. ಅಷ್ಟರ ಮಟ್ಟಿಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿರುವುದು ಬೆಳಕಿಗೆ ಬಂದಿದೆ.
ಬಹುತೇಕ ಹೆಲ್ಮೆಟ್ ರಹಿತ ಚಾಲನೆ ಸೇರಿ ವಿವಿಧ ಸಂಚಾರ ನಿಯಮ ಉಲ್ಲಂಘನೆಯಡಿ ಕಳೆದ ಎರಡು ವರ್ಷಗಳಿಂದ 643 ಬಾರಿ ಟ್ರಾಫಿಕ್ ವೈಯಲೇಷನ್ ಮಾಡಿದ್ದಾರೆ. ಟ್ರಾಫಿಕ್ ವೈಯಲೇಷನ್ ಕೇಸ್ಗಳಿಂದ 643 ಪ್ರಕರಣ ದಾಖಲಾಗಿದ್ದು, 3.22 ಲಕ್ಷ ದಂಡ ವಿಧಿಸಲಾಗಿದೆ. KA04KF9072 ನಂಬರ್ನ ಸ್ಕೂಟಿಯಿಂದ ಸಂಚಾರ ನಿಯಮ ಉಲ್ಲಂಘನೆಯಾಗಿದೆ. ಗಂಗಾನಗರದ ನಿವಾಸಿಯೊಬ್ಬರ ಹೆಸರಿನಲ್ಲಿದ್ದ ದ್ವಿಚಕ್ರ ವಾಹನ ಇದಾಗಿದೆ.
ಕಳೆದ ಎರಡು ವರ್ಷಗಳಿಂದ ಇದೇ ಸ್ಕೂಟಿ ಬಳಸಿಕೊಂಡು ಬೇರೆ - ಬೇರೆ ವ್ಯಕ್ತಿಗಳು ವಾಹನ ಚಲಾಯಿಸಿ ದಂಡ ಬೀಳಲು ಕಾರಣರಾಗಿದ್ದಾರೆ. ಇತ್ತೀಚಿನ ತಿಂಗಳಲ್ಲಿ ಪೊಲೀಸರು ರಸ್ತೆಯಲ್ಲಿ ನಿಂತು ದಂಡ ವಸೂಲಿ ಅಥವಾ ಕೇಸ್ ದಾಖಲಿಸುವ ಪದ್ದತಿಗೆ ತಿಲಾಂಜಲಿ ಹಾಕಿದ್ದು, ಬದಲಾಗಿ ನಗರದ ಬಹುತೇಕ ಜಂಕ್ಷನ್ಗಳಲ್ಲಿ ಅಳವಡಿಸಿದ ಅತ್ಯಾಧುನಿಕ ಕ್ಯಾಮರಗಳಲ್ಲಿ ನಿಯಮ ಉಲ್ಲಂಘಿಸಿದವರ ಭಾವಚಿತ್ರ ಸೆರೆ ಹಿಡಿದು, ಇದರ ಆಧಾರದ ಮೇರೆಗೆ ಡಿಜಿಟಲ್ ಪ್ರಕರಣಗಳನ್ನ ದಾಖಲಿಸಿಕೊಳ್ಳಲಾಗುತ್ತಿದೆ. ಆರ್. ಟಿ ನಗರ, ತರಳುಬಾಳು ಸೇರಿ ಸುತ್ತಮುತ್ತಲಿನ ರಸ್ತೆಗಳಲ್ಲಿ 643 ಬಾರಿ ಸಂಚಾರ ನಿಯಮ ಉಲ್ಲಂಘಿಸಲಾಗಿದೆ ಎಂಬುದು ತಿಳಿದುಬಂದಿದೆ.
ತಂತ್ರಜ್ಞಾನ ಬಳಸಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ವಾಹನ ಸವಾರರ ವಿರುದ್ಧ ಸಂಪರ್ಕ ರಹಿತವಾಗಿ ಪ್ರಕರಣ ದಾಖಲಿಸಿಕೊಳ್ಳುತ್ತಿರುವ ಸಂಚಾರ ಪೊಲೀಸರು ಒನ್ ವೇ ಸಂಚಾರ, ನೋ ಪಾರ್ಕಿಂಗ್, ಫುಟ್ ಪಾತ್ಗಳಲ್ಲಿ ಪಾರ್ಕಿಂಗ್ ಹಾಗೂ ಪಾದಚಾರಿ ರಸ್ತೆಗಳಲ್ಲಿ ವಾಹನ ನಿಲ್ಲಿಸಿದ್ದ ಸವಾರರ ವಿರುದ್ಧ ಕಳೆದ ಆರು ತಿಂಗಳಲ್ಲಿ 5,280 ಕ್ರಿಮಿನಲ್ ಕೇಸ್ (ಜುಲೈ 12-2023) ದಾಖಲಿಸಿಕೊಂಡಿದ್ದರು.
A motorist in the city could have bought three two-wheelers with the money he was fined for violating traffic rules. It has come to light that traffic rules have been broken to such an extent.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm