ಬ್ರೇಕಿಂಗ್ ನ್ಯೂಸ್
18-12-23 07:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.18: ಆರು ಮಂದಿ ಮಹಿಳೆಯರು ರಾಮನಗರ ಬಳಿಯ ಹಂಡಿ ಗುಂಡಿ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ಮರಳಿ ಬರಲು ದಾರಿ ಕಾಣದೆ ಸಿಕ್ಕಿಬಿದ್ದು ಕೊನೆಗೆ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ.
ಮಹಿಳೆಯರು ರಾಮನಗರ ಜಿಲ್ಲೆಯ ಬಸವನಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕಾರು ನಿಲ್ಲಿಸಿ ಅಲ್ಲಿಂದ ಹಂಡಿ ಗುಂಡಿ ಬೆಟ್ಟದ ಕಾಡಿನಲ್ಲಿ ಟ್ರಕ್ಕಿಂಗ್ ತೆರಳಿದ್ದರು. ಸಂಜೆ ವೇಳೆಗೆ ಬೆಟ್ಟದಿಂದ ಇಳಿದು ಬರುತ್ತಿದ್ದಾಗ ರಸ್ತೆ ಸಿಗಲಿಲ್ಲ. ರಾತ್ರಿಯಾದರೂ ಅತ್ತಿತ್ತ ಹುಡುಕಾಡಿ ರಸ್ತೆ ಸಿಗದೇ ಇದ್ದುದರಿಂದ 7.15ರ ಸುಮಾರಿಗೆ 112 ನಂಬರಿಗೆ ಫೋನ್ ಮಾಡಿದ್ದರು.
ಕೂಡಲೇ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಗಸ್ತಿನಲ್ಲಿದ್ದ ರಾಜೇಶ್ ಮತ್ತು ರಮೇಶ್ ಆ ಭಾಗದಲ್ಲೇ ಇದ್ದುದರಿಂದ ಅವರಿಗೆ ಸಂದೇಶ ಹೋಗುತ್ತದೆ. 7.30ರ ಸುಮಾರಿಗೆ ಮಹಿಳೆಯರನ್ನು ಫೋನಲ್ಲಿ ಸಂಪರ್ಕಿಸಿದ ಪೊಲೀಸರು, ನೀವು ಯಾವುದೇ ಆತಂಕ ಪಡುವುದು ಬೇಡ. ನಾವು ಹುಡುಕಿ ಬರುತ್ತೇವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರ ವಾಹನವನ್ನೂ ಬೆಟ್ಟಕ್ಕೆ ಒಯ್ಯಲಾಗದೆ ಅರ್ಧಕ್ಕೆ ನಿಲ್ಲಿಸಿದ್ದಾರೆ.
ರಾತ್ರಿ 8.30ರ ವೇಳೆಗೆ ಸ್ಥಳೀಯ ಸಾರ್ವಜನಿಕರ ಸಹಾಯ ಪಡೆದು ಪೊಲೀಸರು ಟಾರ್ಚ್ ಲೈಟ್ ಹಿಡಿದು ಕಾಡಿನಲ್ಲಿ ಹುಡುಕಾಡಿದ್ದಾರೆ. ಎರಡು ಕಿಮೀ ಉದ್ದಕ್ಕೆ ಕಾಡಿನಲ್ಲಿ ನಡೆದ ಬಳಿಕ ಮಹಿಳೆಯರು ಸಿಕ್ಕಿದ್ದು, ಮರಳಿ ರಸ್ತೆಗೆ ತಲುಪಿಸಿದ್ದಾರೆ. ಹಂಡಿ ಗುಂಡಿ ಬೆಟ್ಟದಲ್ಲಿ ಕರಡಿ, ಚಿರತೆಗಳಿದ್ದು, ಅದೃಷ್ಟವಶಾತ್ ಮಹಿಳೆಯರಿಗೆ ತೊಂದರೆ ಮಾಡಿಲ್ಲ. 112 ಗೆ ಕರೆ ಮಾಡಲು ಫೋನ್ ನೆಟ್ವರ್ಕ್ ಸಿಕ್ಕಿದ್ದರಿಂದ ಬಚಾವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯರು ಬನ್ನೇರುಘಟ್ಟ ಆಸುಪಾಸಿನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ.
Six city women lost their way during a trekking expedition to a hill in Ramanagara district Saturday and were rescued by 112 staff.The women dialled 112 to reach the Emergency Response Support System (ERSS) after losing their way. BR Ravikanthe Gowda, IGP (Central range) confirmed the rescue.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm