ಬ್ರೇಕಿಂಗ್ ನ್ಯೂಸ್
25-12-23 08:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮ್ ಸಿಕ್ವೇನ್ಸಿಂಗ್ ನಲ್ಲಿ ಒಮಿಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವರು, JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ ಎಂದರು. ಹಾಗಂತ, ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ.

ಬಹುತೇಕ ಜೆಎನ್ 1 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಬೆಂಗಳೂರಿನಲ್ಲಿ - 20, ಮೈಸೂರು - 4, ಮಂಡ್ಯ - 3 ಸೇರಿದಂತೆ ರಾಮನಗರದಲ್ಲಿ - 1 ಪತ್ತೆಯಾಗಿದ್ದು, ಇಲ್ಲಿಯವರೆಗೆ ಕೋವಿಡ್ ಬಂದವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿಯೂ JN.1 ಪಾಸಿಟಿವ್ ಇದ್ದಿದ್ದು ವರದಿಯಲ್ಲಿ ಬೆಳಕಿಗೆ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸಂಬಂಧ ರಚಿಸಿರುವ ಕ್ಯಾಬಿನೆಟ್ ಉಪಸಮಿತಿ ಸಭೆ ಮಂಗಳವಾರ ನಡೆಯಲಿದೆ. ಸಭೆಯಲ್ಲಿ ಜೆ.ಎನ್ 1 ಪ್ರಕರಣ ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರು ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಜೆ.ಎನ್.1 ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಇಲ್ಲ. ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಬಗ್ಗೆ ಚಿಂತನೆಗಳಿಲ್ಲ. ಜನ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡ್ತಿಲ್ಲ. ಆ ಮಟ್ಟಕ್ಕೆ ಪ್ಯಾನಿಕ್ ಆಗುವ ಅಗತ್ಯವಿಲ್ಲ. ಪಾಸಿಟಿವ್ ಬಂದವರು ಐಸೊಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
JN1 virus in Karnataka, 34 cases found says health Minister Dinesh Gundu Rao.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm